ಮಂಡ್ಯ

ಮಂಡ್ಯ | ಮಳೆ ಹಾನಿಗೆ ಮುಂಜಾಗ್ರತಾ ಕ್ರಮವಹಿಸಿ ; ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಲಿದ್ದು, ಹವಮಾನ ಇಲಾಖೆಯ ವರದಿಯ ಪ್ರಕಾರ ಈ ಬಾರಿ ವಾಡಿಕೆಕ್ಕಿಂತ‌ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಯಾವುದೇ ಅನಾಹುತವಾಗದಂತೆ ಮುಂಜಾಗ್ರತಾ ಕ್ರಮ ಮತ್ತು‌ ಯೋಜನೆಗಳನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಕುರಿತು ಮುನ್ನೆಚ್ಚರಿಕಾ ಕ್ರಮ ಹಾಗೂ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂಟ್ರೋಲ್‌ ರೂಂ, ಅಗ್ನಿಶಾಮಕ, ಚೆಸ್ಕಾಂ, ಅರಣ್ಯ, ತಹಶೀಲ್ದಾರ್, ನಗರ ಸ್ಥಳೀಯ ಸಂಸ್ಥೆಗಳು 24*7 ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂ ಸ್ಥಾಪಿಸಬೇಕು ಹಾಗೂ ಸಾರ್ವಜನಿಕರು ಸಂಪರ್ಕಿಸಬೇಕಿರುವ ದೂರವಾಣಿ ಸಂಖ್ಯೆಯ ಮಾಹಿತಿ ನೀಡಬೇಕು ಎಂದರು.

ಪರಿಕರಗಳನ್ನು ಸಿದ್ಧಪಡಿಸಿಕೊಳ್ಳಿ ಅಗ್ನಿ ಶಾಮಕ ಇಲಾಖೆಗಳು ಅತಿವೃಷ್ಢಿ ಸಂದರ್ಭದಲ್ಲಿ ಬೇಕಿರುವ ಬೋಟ್, ಲೈಫ್ ಜೆಕಾಟ್ ಸೇರಿದಂತೆ ಇನ್ನಿತರೆ ಪರಿಕರಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿಕೊಳ್ಳಿ. ಸ್ಥಳೀಯವಾಗಿ ನುರಿತ ಈಜುಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ 67 ಗ್ರಾಮಗಳನ್ನು ನೆರೆಗೆ ಸಿಲುಕಬಹುದಾದ ಗ್ರಾಮಗಳು ಎಂದು ಈಗಾಗಲೇ‌ ಗುರುತಿಸಲಾಗಿದೆ. ಈ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ, ತಹಶೀಲ್ದಾರ್ ಗಳು ಗ್ರಾಮ ಪಂಚಾಯಿತಿಗಳೊಂದಿಗೆ ಸಭೆ ನಡೆಸಿ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದರು.

ಅವಶ್ಯಕವಾದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕಿದ್ದು, ಕಾಳಜಿ ಕೇಂದ್ರಗಳಲ್ಲಿ ಬೇಕಿರುವ ಮೂಲಭೂತ ವ್ಯವಸ್ಥೆಗಳು ಕಾಳಜಿ ಕೇಂದ್ರಗಳಲ್ಲಿ ಒದಗಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಿ ಎಂದರು.

ಅರಣ್ಯ ಇಲಾಖೆಯಿಂದ ದುರ್ಬಲ ಮರ ಹಾಗೂ ಮರದ ಕೊಂಬೆಗಳು ನಿಯಮಾನುಸಾರ ತೆರವುಗೊಳಿಸಿ. ವಿದ್ಯುತ್ ತಂತಿಗಳು ಮರಗಳ ಮೇಲಿದ್ದರೆ ಯಾವುದೇ ತೊಂದರೆಯಾಗದಂತೆ ಚೆಸ್ಕಂ ಇಲಾಖೆಯ ಸಮನ್ವಯದೊಂದಿಗೆ ತೆರವುಗೊಳಿಸಿ ಎಂದರು.

ಆರೋಗ್ಯ ಇಲಾಖೆ ಆರೋಗ್ಯ ಸಮಿತಿಯನ್ನು ಚುರುಕುಗೊಳಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಇದರೊಂದಿಗೆ ಮಳೆಗಾಲದಲ್ಲಿ ವಿಷಪೂರಿತ ಹಾವುಗಳ ಕಡಿತದ ಪ್ರಕರಣಗಳು ಉಂಟಾಗುವ ಸಾಧ್ಯತೆ ಇದೆ. ಹಾವು ಕಡಿತಕ್ಕೆ ಔಷಧಿಗಳ ದಾಸ್ತಾನುಗಳು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿರಲಿ ಎಂದರು.

ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಿ ಅಧಿಕಾರಿಗಳು ಮಳೆ ಹಾನಿಯಾದ ನಂತರ ಕ್ರಮ ಕೈಗೊಳ್ಳುವುದಲ್ಲ. ಮೊದಲೇ ಕ್ರಮ ಕೈಗೊಂಡರೆ ಬಹಳಷ್ಟು ಹಾನಿ ತಡೆಗಟ್ಟಬಹುದು. ಆದರಿಂದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಎಂದರು.

ಅತಿವೃಷ್ಢಿಯಿಂದ ಬೆಳೆ ಹಾನಿಯಾದಲ್ಲಿ ತಕ್ಷಣ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅವರು ತಕ್ಷಣ ಜಿಲ್ಲಾಡಳಿತಕ್ಕೆ ವರದಿ ಮಾಡಿ. ತಾಲ್ಲೂಕು ಆಡಳಿತ ಮನೆ ಹಾನಿಯಾದ ಸಂದರ್ಭದಲ್ಲಿ ನಿಗದಿತ ಅವಧಿಯಲ್ಲಿ ಪರಿಹಾರ ಪಾವತಿ ಮಾಡಿ. ಎಸ್.ಡಿ.ಆರ್.ಎಫ್ ಅನುದಾನದಡಿ ಈಗಾಗಲೇ ತಹಶೀಲ್ದಾರ್ ಬಳಿ ಎಲ್ಲಾ ತಾಲ್ಲೂಕುಗಳು ಸೇರಿ ಒಟ್ಟು 2 ಕೋಟಿ ರೂ ಅನುದಾನ ಇರುತ್ತದೆ. ಹೆಚ್ಚುವರಿ ಬೇಕಿದ್ದಲ್ಲಿ ಸಹ ಬಿಡುಗಡೆ ಮಾಡಲಾಗುವುದು ಎಂದರು.

ಕಾರ್ಯಾಗಾರ ಆಯೋಜಿಸಿ ಅತಿವೃಷ್ಠಿ ಸಂದರ್ಭದಲ್ಲಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ಇಲಾಖೆ‌ ಅವರು ಕಾರ್ಯಾಗಾರ ಆಯೋಜಿಸಿ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ,‌ ತುರ್ತು ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ಇಲಾಖೆಗಳ ಸಮನ್ವಯ ಅತಿ ಮುಖ್ಯ, ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ಎಲ್ಲರೂ ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಬಿ‌.ಸಿ. ಶಿವಾನಂದಮೂರ್ತಿ ಮಾತನಾಡಿ, ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಚರಂಡಿ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಹೂಳು ತೆಗೆಯಬೇಕು ಮಳೆ ನೀರು ಅಡೆತಡೆ ಇಲ್ಲದೆ ಹರಿದರೆ ಬಹಳಷ್ಟು ತೊಂದರೆಗಳನ್ನು ತಡೆಗಟ್ಟಬಹುದು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್ , ಕೆ‌‌.ಎಸ್.ಆರ್.ಟಿ.ಸಿ ಜಿಲ್ಲಾ ನಿಯಂತ್ರಕ ನಾಗರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

8 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

9 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

9 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

9 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

9 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

9 hours ago