ಮಂಡ್ಯ

ಮಂಡ್ಯ | ಮಳೆ ಹಾನಿಗೆ ಮುಂಜಾಗ್ರತಾ ಕ್ರಮವಹಿಸಿ ; ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಲಿದ್ದು, ಹವಮಾನ ಇಲಾಖೆಯ ವರದಿಯ ಪ್ರಕಾರ ಈ ಬಾರಿ ವಾಡಿಕೆಕ್ಕಿಂತ‌ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಯಾವುದೇ ಅನಾಹುತವಾಗದಂತೆ ಮುಂಜಾಗ್ರತಾ ಕ್ರಮ ಮತ್ತು‌ ಯೋಜನೆಗಳನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಕುರಿತು ಮುನ್ನೆಚ್ಚರಿಕಾ ಕ್ರಮ ಹಾಗೂ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂಟ್ರೋಲ್‌ ರೂಂ, ಅಗ್ನಿಶಾಮಕ, ಚೆಸ್ಕಾಂ, ಅರಣ್ಯ, ತಹಶೀಲ್ದಾರ್, ನಗರ ಸ್ಥಳೀಯ ಸಂಸ್ಥೆಗಳು 24*7 ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂ ಸ್ಥಾಪಿಸಬೇಕು ಹಾಗೂ ಸಾರ್ವಜನಿಕರು ಸಂಪರ್ಕಿಸಬೇಕಿರುವ ದೂರವಾಣಿ ಸಂಖ್ಯೆಯ ಮಾಹಿತಿ ನೀಡಬೇಕು ಎಂದರು.

ಪರಿಕರಗಳನ್ನು ಸಿದ್ಧಪಡಿಸಿಕೊಳ್ಳಿ ಅಗ್ನಿ ಶಾಮಕ ಇಲಾಖೆಗಳು ಅತಿವೃಷ್ಢಿ ಸಂದರ್ಭದಲ್ಲಿ ಬೇಕಿರುವ ಬೋಟ್, ಲೈಫ್ ಜೆಕಾಟ್ ಸೇರಿದಂತೆ ಇನ್ನಿತರೆ ಪರಿಕರಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿಕೊಳ್ಳಿ. ಸ್ಥಳೀಯವಾಗಿ ನುರಿತ ಈಜುಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ 67 ಗ್ರಾಮಗಳನ್ನು ನೆರೆಗೆ ಸಿಲುಕಬಹುದಾದ ಗ್ರಾಮಗಳು ಎಂದು ಈಗಾಗಲೇ‌ ಗುರುತಿಸಲಾಗಿದೆ. ಈ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ, ತಹಶೀಲ್ದಾರ್ ಗಳು ಗ್ರಾಮ ಪಂಚಾಯಿತಿಗಳೊಂದಿಗೆ ಸಭೆ ನಡೆಸಿ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದರು.

ಅವಶ್ಯಕವಾದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕಿದ್ದು, ಕಾಳಜಿ ಕೇಂದ್ರಗಳಲ್ಲಿ ಬೇಕಿರುವ ಮೂಲಭೂತ ವ್ಯವಸ್ಥೆಗಳು ಕಾಳಜಿ ಕೇಂದ್ರಗಳಲ್ಲಿ ಒದಗಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಿ ಎಂದರು.

ಅರಣ್ಯ ಇಲಾಖೆಯಿಂದ ದುರ್ಬಲ ಮರ ಹಾಗೂ ಮರದ ಕೊಂಬೆಗಳು ನಿಯಮಾನುಸಾರ ತೆರವುಗೊಳಿಸಿ. ವಿದ್ಯುತ್ ತಂತಿಗಳು ಮರಗಳ ಮೇಲಿದ್ದರೆ ಯಾವುದೇ ತೊಂದರೆಯಾಗದಂತೆ ಚೆಸ್ಕಂ ಇಲಾಖೆಯ ಸಮನ್ವಯದೊಂದಿಗೆ ತೆರವುಗೊಳಿಸಿ ಎಂದರು.

ಆರೋಗ್ಯ ಇಲಾಖೆ ಆರೋಗ್ಯ ಸಮಿತಿಯನ್ನು ಚುರುಕುಗೊಳಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಇದರೊಂದಿಗೆ ಮಳೆಗಾಲದಲ್ಲಿ ವಿಷಪೂರಿತ ಹಾವುಗಳ ಕಡಿತದ ಪ್ರಕರಣಗಳು ಉಂಟಾಗುವ ಸಾಧ್ಯತೆ ಇದೆ. ಹಾವು ಕಡಿತಕ್ಕೆ ಔಷಧಿಗಳ ದಾಸ್ತಾನುಗಳು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿರಲಿ ಎಂದರು.

ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಿ ಅಧಿಕಾರಿಗಳು ಮಳೆ ಹಾನಿಯಾದ ನಂತರ ಕ್ರಮ ಕೈಗೊಳ್ಳುವುದಲ್ಲ. ಮೊದಲೇ ಕ್ರಮ ಕೈಗೊಂಡರೆ ಬಹಳಷ್ಟು ಹಾನಿ ತಡೆಗಟ್ಟಬಹುದು. ಆದರಿಂದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಎಂದರು.

ಅತಿವೃಷ್ಢಿಯಿಂದ ಬೆಳೆ ಹಾನಿಯಾದಲ್ಲಿ ತಕ್ಷಣ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅವರು ತಕ್ಷಣ ಜಿಲ್ಲಾಡಳಿತಕ್ಕೆ ವರದಿ ಮಾಡಿ. ತಾಲ್ಲೂಕು ಆಡಳಿತ ಮನೆ ಹಾನಿಯಾದ ಸಂದರ್ಭದಲ್ಲಿ ನಿಗದಿತ ಅವಧಿಯಲ್ಲಿ ಪರಿಹಾರ ಪಾವತಿ ಮಾಡಿ. ಎಸ್.ಡಿ.ಆರ್.ಎಫ್ ಅನುದಾನದಡಿ ಈಗಾಗಲೇ ತಹಶೀಲ್ದಾರ್ ಬಳಿ ಎಲ್ಲಾ ತಾಲ್ಲೂಕುಗಳು ಸೇರಿ ಒಟ್ಟು 2 ಕೋಟಿ ರೂ ಅನುದಾನ ಇರುತ್ತದೆ. ಹೆಚ್ಚುವರಿ ಬೇಕಿದ್ದಲ್ಲಿ ಸಹ ಬಿಡುಗಡೆ ಮಾಡಲಾಗುವುದು ಎಂದರು.

ಕಾರ್ಯಾಗಾರ ಆಯೋಜಿಸಿ ಅತಿವೃಷ್ಠಿ ಸಂದರ್ಭದಲ್ಲಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ಇಲಾಖೆ‌ ಅವರು ಕಾರ್ಯಾಗಾರ ಆಯೋಜಿಸಿ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ,‌ ತುರ್ತು ಸಂದರ್ಭದಲ್ಲಿ ಕೆಲಸ ನಿರ್ವಹಿಸಲು ಇಲಾಖೆಗಳ ಸಮನ್ವಯ ಅತಿ ಮುಖ್ಯ, ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ಎಲ್ಲರೂ ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಬಿ‌.ಸಿ. ಶಿವಾನಂದಮೂರ್ತಿ ಮಾತನಾಡಿ, ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಚರಂಡಿ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಹೂಳು ತೆಗೆಯಬೇಕು ಮಳೆ ನೀರು ಅಡೆತಡೆ ಇಲ್ಲದೆ ಹರಿದರೆ ಬಹಳಷ್ಟು ತೊಂದರೆಗಳನ್ನು ತಡೆಗಟ್ಟಬಹುದು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್ , ಕೆ‌‌.ಎಸ್.ಆರ್.ಟಿ.ಸಿ ಜಿಲ್ಲಾ ನಿಯಂತ್ರಕ ನಾಗರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

8 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

8 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

8 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

8 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

8 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

8 hours ago