ಮಂಡ್ಯ

ಡೆಂಗ್ಯೂ ಬಾರದಂತೆ ಮುನ್ನೆಚ್ಚರಿಕೆ ಕ್ರಮವಾಹಿಸಿ: ಡಾ.ಕುಮಾರ

ಮಂಡ್ಯ : ಡೆಂಗ್ಯೂ ಜ್ವರ ಒಂದು ಮಾರಕ ಖಾಯಿಲೆ, ಈ ಮಹಾಮಾರಿ ಡೆಂಗ್ಯೂ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಜಾಗೃತಿ ಮೂಡಿಸಿದರು.

ಇಂದು (ಮೇ.16) ರಂದು ನಗರದ ಸಂಜಯ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಡೆಂಗ್ಯೂ ಎಂಬ ಮಾರಕ ರೋಗವನ್ನು ಹೋಗಲಾಡಿಸುವ ಮೊದಲ ಔಷಧಿ ಎಂದರೆ ಅದು ಅರಿವು, ಸಾರ್ವಜನಿಕರು ಡೆಂಗ್ಯೂ ಜ್ವರ ತಡೆಗಟ್ಟುವ ಬಗ್ಗೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದರು.

ಸಾರ್ವಜನಿಕರು ತಾವು ವಾಸಿಸುವ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವುದು ಹಾಗೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯ, ನಮ್ಮೆಲ್ಲರ ಆದ್ಯ ಕರ್ತವ್ಯ, ಡೆಂಗ್ಯೂ ಬಂದ ನಂತರ ಎಚ್ಚೆತ್ತುಕೊಳ್ಳುವುದಕ್ಕಿಂತ ಡೆಂಗ್ಯೂ ಬಾರದಂತೆ ನೋಡಿಕೊಳ್ಳುವುದು ಅತೀ ಮುಖ್ಯ ಎಂದರು.

ಡೆಂಗ್ಯೂ ಕುರಿತು ನಾವೆಲ್ಲರೂ ಜಾಗೃತರಾದರೆ ಡೆಂಗ್ಯೂ ಎಂಬ ಮಹಾಮಾರಿಯನ್ನು ಹೋಗಲಾಡಿಸಬಹುದು, ಮಳೆಗಾಲ ಆರಂಭವಾಗುವುದರಿಂದ ಚರಂಡಿ ಹಾಗೂ ಅರ್ಧಕ್ಕೆ ನಿಂತು ಹೋದ ಕಟ್ಟಡಗಳಲ್ಲಿ ನೀರು ನಿಂತರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ, ಸಾರ್ವಜನಿಕರು ತಮ್ಮ ತಮ್ಮ ಮನೆಗಳ ಮುಂಭಾಗದಲ್ಲಿ ಇರುವ ಚರಂಡಿಗಳನ್ನು ಸ್ವಚ್ಚಗೊಳಿಸಿ, ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಸ್ವಯಂ ಪ್ರೇರಿತರಾಗಿ ಸ್ವಚ್ಚಗೊಳಿಸುವುದರಿಂದ ಡೆಂಗ್ಯೂ ಜ್ವರವನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್ ಮಾತನಾಡಿ, ಈ ಬಾರಿ ಡೆಂಗ್ಯೂ ಜ್ವರದ ಘೋಷ ವಾಕ್ಯ “ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ”, ಮೊದಲು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಎಲ್ಲಾದರೂ ಸೊಳ್ಳೆ ಉತ್ಪತ್ತಿಯಾಗುವಂತಹ ಸ್ಥಳಗಳು ಇದ್ದಾರೆ ಅದನ್ನು ಗುರುತಿಸಿ ಸ್ವಚ್ಛಗೊಳಿಸಿ, ನೀರು ನಿಲ್ಲದಂತೆ ಸ್ವಚ್ಚ ಗೊಳಿಸಿದ ಸ್ಥಳಗಳನ್ನು ಮುಚ್ಚಿಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಕಾಂತರಾಜು, ಡಾ. ಬೆಟ್ಟಸ್ವಾಮಿ,ಎಮ್.ಎನ್. ಆಶಾಲತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಜಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ
ರಾಷ್ಟ್ರೀಯ ಡೆಂಗ್ಯೂ ಜ್ವರ ದಿನಾಚರಣೆ ಪ್ರಯುಕ್ತ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರದ ಸಂಜಯ್ ವೃತ್ತದಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ನಂತರ ಎಸ್.ಡಿ. ಜಯರಾಮ್ ಪ್ಯಾರಮೆಡಿಕಲ್ ವಿಜ್ಞಾನ ಸಂಸ್ಥೆ ಮತ್ತು ಸದ್ವಿದ್ಯಾ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಸಂಜಯ್ ವೃತ್ತದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಕಚೇರಿಯವರೆಗೂ ಜಾಥಾ ನಡೆಯಿತು,

ವಿದ್ಯಾರ್ಥಿನಿಯರು ‘ಕೀಟ ಚಿಕ್ಕದು ಕಾಟ ದೊಡ್ಡದು’, ‘ವಿದ್ಯೆ ಕದಿಯಲಾಗದ ಸಂಪತ್ತು ಆರೋಗ್ಯ ಕೊಳ್ಳಲಾಗದ ಸಂಪತ್ತು’, ‘ಸ್ವಯಂ ರಕ್ಷಣಾ ವಿಧಾನವನ್ನು ಬಳಸಿ ಸೊಳ್ಳೆಗಳನ್ನು ನಿಯಂತ್ರಿಸಿ’ ಎಂಬ ಜಾಗೃತಿ ಫಲಕಗಳನ್ನು ಜಾಥಾದಲ್ಲಿ ಪ್ರದರ್ಶನ ಮಾಡಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago