ಮಂಡ್ಯ

ಲೋಕಾಯುಕ್ತ ಬಲೆಗೆ ಬಿದ್ದ ತಾಲ್ಲೂಕು ಕಚೇರಿ ನೌಕರ

ಮದ್ದೂರು : ರೈತರಿಂದ ಲಂಚ ಸ್ವೀಕರಿ ಸುತ್ತಿದ್ದಾಗ ತಾಲೂಕು ಕಚೇರಿಯ ನೌಕರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ.

ಪಟ್ಟಣದ ತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ) ಶಾಖೆಯ ಮಂಜುನಾಥ್ ಲೋಕಾಯುಕ್ತ ಬಿದ್ದಿದ್ದು, ಈತನನ್ನು ವಶಕ್ಕೆ ಪಡೆಯಲಾಗಿದೆ.ತಾಲೂಕಿನ ಬಿದರ ಮೇಳೆ ಕೊಪ್ಪಲು ಗ್ರಾಮದ ಮೋಹನ್ ರ ಜಮೀನು ವಿವಾದ ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿದ್ದು, ಅದರ ತುರ್ತು ವಿಲೇವಾರಿಗಾಗಿ ಮಂಜುನಾಥರ ಬಳಿ ಹೋಗಿದ್ದಾಗ ಹಣ ನೀಡಬೇಕಾಗುತ್ತದೆ ಎಂದು ಹೇಳಿದ್ದರು.

ಬಿದರ ಮೇಳೆಕೊಪ್ಪಲು ಗ್ರಾಮದ ಸರ್ವೇ ನಂಬರ್ 226 ಜಮೀನಿನ ವಿವಾದ ಉಪ ವಿಭಾಗಾಧಿಕಾರಿ ಕೋರ್ಟ್ ನಲ್ಲಿರುವ ಪ್ರಕರಣ ಇದಾಗಿದ್ದು, ಈ ಸಂಬಂಧ ಹಣ ಕೇಳಿದ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ಮೋಹನ್ ದೂರು ಸಲ್ಲಿಸಿದ್ದರು.ಅದರಂತೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದು, ತಾಲೂಕು ಕಚೇರಿಯ ಹೊರಭಾಗದಲ್ಲಿ ಅಂಗಡಿ ಮಳಿಗೆ ಬಳಿ ಮೋಹನ್ ರವರಿಂದ 10000 ರೂ ಹಣ ಪಡೆಯುತ್ತಿದ್ದಾಗ ಮಂಜುನಾಥ್ ಲೋಕಾಯುಕ್ತ ವಶಕ್ಕೆ ಸಿಕ್ಕಿ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್.ಪಿ ಸುಜಿತ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಡಿವೈಎಸ್ ಪಿ ಸುನಿಲ್ ಕುಮಾರ್, ಇನ್ ಸ್ಪೆಕ್ಟರ್ ಪ್ರಕಾಶ್, ಸಿಬ್ಬಂದಿಗಳಾದ ಶಂಕರ್, ಶರತ್,ಮಹಾದೇವಯ್ಯ ,ಮಹಾದೇವಸ್ವಾಮಿ, ನಂದೀಶ್ ,ಯೋಗೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

lokesh

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

37 mins ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

51 mins ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

2 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

7 hours ago