Ravi Ganiga
ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.
ಅವರು ಇಂದು ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್ಗೆ ಅಗ್ನಿ ಸ್ಪರ್ಶ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೈಶುಗರ್ ಸಕ್ಕರೆ ಕಾರ್ಖಾನೆಗೆ ಮೂಲ ಬಂಡವಾಳಕ್ಕೆ 28 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಮೈಶುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಸಲ್ಲಿಸಿದ್ದಾರೆ. ಸರ್ಕಾರ ಸಕಾರತ್ಪಕವಾಗಿ ಸ್ಪಂದಿಸಲಿದೆ ಎಂದರು.
ಮೈಶುಗರ್ ಸಕ್ಕರೆ ಕಾರ್ಖಾನೆ ರೈತರ ಏಳಿಗೆಗಾಗಿ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಕಾರ್ಖಾನೆಯನ್ನು ಲಾಭ-ನಷ್ಠ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ. ನಿಧನಗತಿಯಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಸಹ ಲಾಭ ಗಳಿಸಲಿದೆ. ಸಮಯಾವಕಾಶ ಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಓದಿದ್ರಾ..?:- ಅರ್ಜುನ ಆನೆ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ದಿಢೀರ್ ಮುಂದೂಡಿಕೆ
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…