ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕರಕವಾಗಿದ್ದು, ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.ಕಾರ್ಯಪಡೆ ನಿಗಧಿತವಾಗಿ ದಾಳಿ ನಡೆಸಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು 14 ನೇ ಹಾಗೂ 15 ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಟೆಂಡರ್ ಆಹ್ವಾನದ ಹಂತಲ್ಲಿದ್ದಾರೆ ಟೆಂಡರ್ ಆಹ್ವಾನ ಮಾಡಬೇಕು ಹಾಗೂ ಕಾಮಗಾರಿ ಪ್ರಾರಂಭ ಮಾಡಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದರು.
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕೈಗೊಂಡಿರುವ ಹಿಂದಿನ ಸಾಲಿನ ಕಾಮಗಾರಿಗಳನ್ನು ಶೇ 100 ರಷ್ಟು ಹಾಗೂ ಪ್ರಸಕ್ತ ಸಾಲಿನ ಕಾಮಗಾರಿಗಳನ್ನು ಶೇ 50 ರಷ್ಟು ಈ ಮಾಹೆಯ ಅಂತ್ಯದೊಳಗೆ ಪ್ರಗತಿ ಸಾಧಿಸಿ ಮುಂದಿನ ಸಭೆಗೆ ವರದಿ ಸಲ್ಲಿಸಬೇಕು ಎಂದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿಸಿದರು.
ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಮನೆಗಳಿಂದ ಕಸ ಸಂಗ್ರಹಿಸುವ ಸಂದರ್ಭದಲ್ಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ಬೇರ್ಪಡಿಸಿ ಸಂಗ್ರಹಿಸಲು ಯೋಜನೆ ರೂಪಿಸಿಕೊಳ್ಳಬೇಕು. ಸಾರ್ವಜನಿಕರಲ್ಲಿ ತ್ಯಾಜ್ಯ ಪ್ರತ್ಯೇಕ ಸಂಗ್ರಹಣೆಯ ಬಗ್ಗೆ ಅರಿವು ಮೂಡಿಸಬೇಕು. ಡಿಸೆಂಬರ್ 15 ರೊಳಗಾಗಿ ಯೋಜನೆ ಅನುಷ್ಠಾನವಾಗಿ ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆ ಸಂಗ್ರಹಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಾರ್ವತಿ ದೇವಿ, ನಗರಸಭೆ ಆಯುಕ್ತ ಮಂಜುನಾಥ ಸೇರಿದಂತೆ ಇನ್ನಿತರು ಇದ್ದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…