ಮಂಡ್ಯ

ಏಕ ಬಳಕೆ ಪ್ಲಾಸ್ಟಿಕ್‌ ನಿಯಂತ್ರಿಸಲು ಕಾರ್ಯಪಡೆ

ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕರಕವಾಗಿದ್ದು, ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.ಕಾರ್ಯಪಡೆ ನಿಗಧಿತವಾಗಿ ದಾಳಿ ನಡೆಸಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು 14 ನೇ ಹಾಗೂ 15 ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಟೆಂಡರ್ ಆಹ್ವಾನದ ಹಂತಲ್ಲಿದ್ದಾರೆ ಟೆಂಡರ್ ಆಹ್ವಾನ ಮಾಡಬೇಕು ಹಾಗೂ ಕಾಮಗಾರಿ ಪ್ರಾರಂಭ ಮಾಡಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದರು.

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕೈಗೊಂಡಿರುವ ಹಿಂದಿನ ಸಾಲಿನ ಕಾಮಗಾರಿಗಳನ್ನು ಶೇ 100 ರಷ್ಟು ಹಾಗೂ ಪ್ರಸಕ್ತ ಸಾಲಿನ ಕಾಮಗಾರಿಗಳನ್ನು ಶೇ 50 ರಷ್ಟು ಈ ಮಾಹೆಯ ಅಂತ್ಯದೊಳಗೆ ಪ್ರಗತಿ ಸಾಧಿಸಿ ಮುಂದಿನ ಸಭೆಗೆ ವರದಿ ಸಲ್ಲಿಸಬೇಕು ಎಂದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿಸಿದರು.

ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಮನೆಗಳಿಂದ ಕಸ ಸಂಗ್ರಹಿಸುವ ಸಂದರ್ಭದಲ್ಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ಬೇರ್ಪಡಿಸಿ ಸಂಗ್ರಹಿಸಲು ಯೋಜನೆ ರೂಪಿಸಿಕೊಳ್ಳಬೇಕು. ಸಾರ್ವಜನಿಕರಲ್ಲಿ ತ್ಯಾಜ್ಯ ಪ್ರತ್ಯೇಕ ಸಂಗ್ರಹಣೆಯ ಬಗ್ಗೆ ಅರಿವು ಮೂಡಿಸಬೇಕು. ಡಿಸೆಂಬರ್ 15 ರೊಳಗಾಗಿ ಯೋಜನೆ ಅನುಷ್ಠಾನವಾಗಿ ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆ ಸಂಗ್ರಹಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಾರ್ವತಿ ದೇವಿ, ನಗರಸಭೆ ಆಯುಕ್ತ ಮಂಜುನಾಥ ಸೇರಿದಂತೆ ಇನ್ನಿತರು ಇದ್ದರು.

andolana

Recent Posts

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

35 mins ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

37 mins ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

39 mins ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

4 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

4 hours ago