ಮಂಡ್ಯ

ಏಕ ಬಳಕೆ ಪ್ಲಾಸ್ಟಿಕ್‌ ನಿಯಂತ್ರಿಸಲು ಕಾರ್ಯಪಡೆ

ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಕ ಬಳಕೆ ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಕರಕವಾಗಿದ್ದು, ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು.ಕಾರ್ಯಪಡೆ ನಿಗಧಿತವಾಗಿ ದಾಳಿ ನಡೆಸಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು 14 ನೇ ಹಾಗೂ 15 ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಟೆಂಡರ್ ಆಹ್ವಾನದ ಹಂತಲ್ಲಿದ್ದಾರೆ ಟೆಂಡರ್ ಆಹ್ವಾನ ಮಾಡಬೇಕು ಹಾಗೂ ಕಾಮಗಾರಿ ಪ್ರಾರಂಭ ಮಾಡಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದರು.

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕೈಗೊಂಡಿರುವ ಹಿಂದಿನ ಸಾಲಿನ ಕಾಮಗಾರಿಗಳನ್ನು ಶೇ 100 ರಷ್ಟು ಹಾಗೂ ಪ್ರಸಕ್ತ ಸಾಲಿನ ಕಾಮಗಾರಿಗಳನ್ನು ಶೇ 50 ರಷ್ಟು ಈ ಮಾಹೆಯ ಅಂತ್ಯದೊಳಗೆ ಪ್ರಗತಿ ಸಾಧಿಸಿ ಮುಂದಿನ ಸಭೆಗೆ ವರದಿ ಸಲ್ಲಿಸಬೇಕು ಎಂದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿಸಿದರು.

ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಮನೆಗಳಿಂದ ಕಸ ಸಂಗ್ರಹಿಸುವ ಸಂದರ್ಭದಲ್ಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ಬೇರ್ಪಡಿಸಿ ಸಂಗ್ರಹಿಸಲು ಯೋಜನೆ ರೂಪಿಸಿಕೊಳ್ಳಬೇಕು. ಸಾರ್ವಜನಿಕರಲ್ಲಿ ತ್ಯಾಜ್ಯ ಪ್ರತ್ಯೇಕ ಸಂಗ್ರಹಣೆಯ ಬಗ್ಗೆ ಅರಿವು ಮೂಡಿಸಬೇಕು. ಡಿಸೆಂಬರ್ 15 ರೊಳಗಾಗಿ ಯೋಜನೆ ಅನುಷ್ಠಾನವಾಗಿ ಹಸಿ ಮತ್ತು ಒಣ ಕಸವನ್ನು ಬೇರೆ ಬೇರೆ ಸಂಗ್ರಹಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ನಾಗರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಾರ್ವತಿ ದೇವಿ, ನಗರಸಭೆ ಆಯುಕ್ತ ಮಂಜುನಾಥ ಸೇರಿದಂತೆ ಇನ್ನಿತರು ಇದ್ದರು.

andolana

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

6 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

9 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

13 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

17 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

17 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

17 hours ago