ಶ್ರೀರಂಗಪಟ್ಟಣ: ವಿಶ್ವ ವಿಖ್ಯಾತ ಕೃಷ್ಣರಾಜಸಾಗರದ ಬೃಂದಾವನದಲ್ಲಿ ಶನಿವಾರ ಸಂಜೆ ತಾಂತ್ರಿಕ ಕಾರಣದಿಂದ ಸಂಗೀತ ಕಾರಂಜಿ ಪ್ರಾರಂಭ ವಾಗುವುದು ತಡವಾದ ಕಾರಣ ಪ್ರವಾಸಿಗರ ಪ್ರವೇಶ ದ್ವಾರದಲ್ಲಿ ಟಿಕೆಟ್ ಕೌಂಟರ್ ನ ಸಿಬ್ಬಂದಿ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸತತ ರಜಾ ಹಿನ್ನಲೆಯಲ್ಲಿ ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದರು, ಶನಿವಾರ ಸಂಜೆ ಎಂದಿನಂತೆ ೬.೪೫ ಕ್ಕೆ ನೃತ್ಯ ಕಾರಂಜಿ ಪ್ರಾರಂಭವಾಗ ಬೇಕಾಗಿತ್ತು. ಸಂಗೀತಾ ಕಾರಂಜಿಯು ತಾಂತ್ರಿಕ ಕಾರಣದಿಂದ ಸುಮಾರು ೧ ಘಂಟೆಯಾದರೂ ಪ್ರಾರಂಭವಾಗದ ಕಾರಣ ರೊಚ್ಚಗೆದ್ದ ಪ್ರವಾಸಿಗರು, ನೃತ್ಯ ಕಾರಂಜಿ ಬಳಿ ಪ್ರವಾಸಿಗರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಜೊತೆ ಜಗಳವಾಡಿ ನಂತರ ಪ್ರವೇಶ ಟೆಕೆಟ್ ಕೌಂಟರ್ ಬಳಿ ಬಂದು ಟಿಕೆಟ್ ನೀಡಲು ನಿಯೋಜನೆಗೊಂಡಿರುವ ಕೆ.ಸಿ.ಐ.ಸಿ ಸಿಬ್ಬಂದಿಗಳ ಜೊತೆ ಜಗಳವಾಡಿ ನಂತರ ಆಕ್ರೋಷಗೊಂಡ ಪ್ರವಾಸಿಗರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಮಾಡಿರುವ ಬಗ್ಗೆ ವರದಿಯಾಗಿದೆ.
ತಾಂತ್ರಿಕ ಕಾರಣದಿಂದ ನೃತ್ಯ ಕಾರಂಜಿ ತಡವಾಗಿದ್ದು, ನಮ್ಮ ಸಿಬ್ಬಂದಿಗಳು ಚುನಾವಣೆ ಕರ್ತವ್ಯ ಮುಗಿಸಿಕೊಂಡು ಕೂಡ ಬಂದಿದ್ದು, ಪ್ರವಾಸಿಗರು ಸಂಹವನ ಸಮಸ್ಯೆಯಿಂದ ಟೆಕೆಟ್ ಕೌಂಟರ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವುದು ಬೇಸರವಾಗಿದೆ, ಈ ಘಟನೆ ಕುರಿತು ನಮ್ಮ ಕಾ.ನೀ.ನಿಗಮ ಮತ್ತು ಕೆ.ಎಸ್.ಐ.ಎಸ್.ಎಫ್, ಹಾಗೂ ಟೆಕಟ್ ಕೌಂಟರ್ ನಿರ್ವಹಣೆ ಮಾಡುವ ಕೆ.ಸಿ.ಐ.ಸಿ ಕಂಪನಿ ಜೊತೆ ಸೊಮವಾರ ಸಭೆ ನಡೆಸಿ ಮುಂದೆ ಈ ರೀತಿ ಘಟನೆ ನಡೆಯದಂತೆ ಕ್ರಮ ಜರುಗಿಸಲಾಗುತ್ತದೆ.
-ರಘುರಾಮ್, ಅಧೀಕ್ಷಕ ಅಭಿಯಂತರ , ಕಾವೇರಿ ನೀರಾವರಿ ನಿಗಮ, ಮಂಡ್ಯ
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…