ಶ್ರೀರಂಗಪಟ್ಟಣ: ವಿಶ್ವ ವಿಖ್ಯಾತ ಕೃಷ್ಣರಾಜಸಾಗರದ ಬೃಂದಾವನದಲ್ಲಿ ಶನಿವಾರ ಸಂಜೆ ತಾಂತ್ರಿಕ ಕಾರಣದಿಂದ ಸಂಗೀತ ಕಾರಂಜಿ ಪ್ರಾರಂಭ ವಾಗುವುದು ತಡವಾದ ಕಾರಣ ಪ್ರವಾಸಿಗರ ಪ್ರವೇಶ ದ್ವಾರದಲ್ಲಿ ಟಿಕೆಟ್ ಕೌಂಟರ್ ನ ಸಿಬ್ಬಂದಿ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸತತ ರಜಾ ಹಿನ್ನಲೆಯಲ್ಲಿ ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದರು, ಶನಿವಾರ ಸಂಜೆ ಎಂದಿನಂತೆ ೬.೪೫ ಕ್ಕೆ ನೃತ್ಯ ಕಾರಂಜಿ ಪ್ರಾರಂಭವಾಗ ಬೇಕಾಗಿತ್ತು. ಸಂಗೀತಾ ಕಾರಂಜಿಯು ತಾಂತ್ರಿಕ ಕಾರಣದಿಂದ ಸುಮಾರು ೧ ಘಂಟೆಯಾದರೂ ಪ್ರಾರಂಭವಾಗದ ಕಾರಣ ರೊಚ್ಚಗೆದ್ದ ಪ್ರವಾಸಿಗರು, ನೃತ್ಯ ಕಾರಂಜಿ ಬಳಿ ಪ್ರವಾಸಿಗರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಜೊತೆ ಜಗಳವಾಡಿ ನಂತರ ಪ್ರವೇಶ ಟೆಕೆಟ್ ಕೌಂಟರ್ ಬಳಿ ಬಂದು ಟಿಕೆಟ್ ನೀಡಲು ನಿಯೋಜನೆಗೊಂಡಿರುವ ಕೆ.ಸಿ.ಐ.ಸಿ ಸಿಬ್ಬಂದಿಗಳ ಜೊತೆ ಜಗಳವಾಡಿ ನಂತರ ಆಕ್ರೋಷಗೊಂಡ ಪ್ರವಾಸಿಗರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಮಾಡಿರುವ ಬಗ್ಗೆ ವರದಿಯಾಗಿದೆ.
ತಾಂತ್ರಿಕ ಕಾರಣದಿಂದ ನೃತ್ಯ ಕಾರಂಜಿ ತಡವಾಗಿದ್ದು, ನಮ್ಮ ಸಿಬ್ಬಂದಿಗಳು ಚುನಾವಣೆ ಕರ್ತವ್ಯ ಮುಗಿಸಿಕೊಂಡು ಕೂಡ ಬಂದಿದ್ದು, ಪ್ರವಾಸಿಗರು ಸಂಹವನ ಸಮಸ್ಯೆಯಿಂದ ಟೆಕೆಟ್ ಕೌಂಟರ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವುದು ಬೇಸರವಾಗಿದೆ, ಈ ಘಟನೆ ಕುರಿತು ನಮ್ಮ ಕಾ.ನೀ.ನಿಗಮ ಮತ್ತು ಕೆ.ಎಸ್.ಐ.ಎಸ್.ಎಫ್, ಹಾಗೂ ಟೆಕಟ್ ಕೌಂಟರ್ ನಿರ್ವಹಣೆ ಮಾಡುವ ಕೆ.ಸಿ.ಐ.ಸಿ ಕಂಪನಿ ಜೊತೆ ಸೊಮವಾರ ಸಭೆ ನಡೆಸಿ ಮುಂದೆ ಈ ರೀತಿ ಘಟನೆ ನಡೆಯದಂತೆ ಕ್ರಮ ಜರುಗಿಸಲಾಗುತ್ತದೆ.
-ರಘುರಾಮ್, ಅಧೀಕ್ಷಕ ಅಭಿಯಂತರ , ಕಾವೇರಿ ನೀರಾವರಿ ನಿಗಮ, ಮಂಡ್ಯ
ಮುಂಬೈ : ಐಪಿಎಲ್ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…