ಮಂಡ್ಯ

ಬೃಂದಾವನದಲ್ಲಿ ತಾಂತ್ರಿಕ ಸಮಸ್ಯೆ: ಪ್ರವಾಸಿಗರಿಂದ ಕೌಂಟರ್‌ ಸಿಬ್ಬಂದಿ ಮೇಲೆ ಹಲ್ಲೆ!

ಶ್ರೀರಂಗಪಟ್ಟಣ: ವಿಶ್ವ ವಿಖ್ಯಾತ ಕೃಷ್ಣರಾಜಸಾಗರದ ಬೃಂದಾವನದಲ್ಲಿ ಶನಿವಾರ ಸಂಜೆ ತಾಂತ್ರಿಕ ಕಾರಣದಿಂದ ಸಂಗೀತ ಕಾರಂಜಿ ಪ್ರಾರಂಭ ವಾಗುವುದು ತಡವಾದ ಕಾರಣ ಪ್ರವಾಸಿಗರ ಪ್ರವೇಶ ದ್ವಾರದಲ್ಲಿ ಟಿಕೆಟ್ ಕೌಂಟರ್ ನ ಸಿಬ್ಬಂದಿ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಸತತ ರಜಾ ಹಿನ್ನಲೆಯಲ್ಲಿ ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದರು, ಶನಿವಾರ ಸಂಜೆ ಎಂದಿನಂತೆ ೬.೪೫ ಕ್ಕೆ ನೃತ್ಯ ಕಾರಂಜಿ ಪ್ರಾರಂಭವಾಗ ಬೇಕಾಗಿತ್ತು. ಸಂಗೀತಾ ಕಾರಂಜಿಯು ತಾಂತ್ರಿಕ ಕಾರಣದಿಂದ ಸುಮಾರು ೧ ಘಂಟೆಯಾದರೂ ಪ್ರಾರಂಭವಾಗದ ಕಾರಣ ರೊಚ್ಚಗೆದ್ದ ಪ್ರವಾಸಿಗರು, ನೃತ್ಯ ಕಾರಂಜಿ ಬಳಿ ಪ್ರವಾಸಿಗರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಜೊತೆ ಜಗಳವಾಡಿ ನಂತರ ಪ್ರವೇಶ ಟೆಕೆಟ್ ಕೌಂಟರ್ ಬಳಿ ಬಂದು ಟಿಕೆಟ್ ನೀಡಲು ನಿಯೋಜನೆಗೊಂಡಿರುವ ಕೆ.ಸಿ.ಐ.ಸಿ ಸಿಬ್ಬಂದಿಗಳ ಜೊತೆ ಜಗಳವಾಡಿ ನಂತರ ಆಕ್ರೋಷಗೊಂಡ ಪ್ರವಾಸಿಗರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಮಾಡಿರುವ ಬಗ್ಗೆ ವರದಿಯಾಗಿದೆ.

ತಾಂತ್ರಿಕ ಕಾರಣದಿಂದ ನೃತ್ಯ ಕಾರಂಜಿ ತಡವಾಗಿದ್ದು, ನಮ್ಮ ಸಿಬ್ಬಂದಿಗಳು ಚುನಾವಣೆ ಕರ್ತವ್ಯ ಮುಗಿಸಿಕೊಂಡು ಕೂಡ ಬಂದಿದ್ದು, ಪ್ರವಾಸಿಗರು ಸಂಹವನ ಸಮಸ್ಯೆಯಿಂದ ಟೆಕೆಟ್ ಕೌಂಟರ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವುದು ಬೇಸರವಾಗಿದೆ, ಈ ಘಟನೆ ಕುರಿತು ನಮ್ಮ ಕಾ.ನೀ.ನಿಗಮ ಮತ್ತು ಕೆ.ಎಸ್.ಐ.ಎಸ್.ಎಫ್, ಹಾಗೂ ಟೆಕಟ್ ಕೌಂಟರ್ ನಿರ್ವಹಣೆ ಮಾಡುವ ಕೆ.ಸಿ.ಐ.ಸಿ ಕಂಪನಿ ಜೊತೆ ಸೊಮವಾರ ಸಭೆ ನಡೆಸಿ ಮುಂದೆ ಈ ರೀತಿ ಘಟನೆ ನಡೆಯದಂತೆ ಕ್ರಮ ಜರುಗಿಸಲಾಗುತ್ತದೆ.
-ರಘುರಾಮ್, ಅಧೀಕ್ಷಕ ಅಭಿಯಂತರ , ಕಾವೇರಿ ನೀರಾವರಿ ನಿಗಮ, ಮಂಡ್ಯ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

2 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

2 hours ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

2 hours ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

2 hours ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

2 hours ago