ಮಂಡ್ಯ

ರಸಗೊಬ್ಬರ ದಾಸ್ತಾನು ಮಳಿಗೆಗೆ ತಹಸಿಲ್ದಾರ್ ದಿಢೀರ್‌ ಭೇಟಿ

ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ ತಹಸಿಲ್ದಾರ್ ಪರಶುರಾಮ್ ಸತ್ತಿಗೇರಿ ಎಚ್ಚರಿಕೆ ನೀಡಿದರು.

ಪಟ್ಟಣದ ಟಿಎಪಿಸಿಎಂಎಸ್ ದಾಸ್ತಾನು ಗೋಡೌನ್‌ಗೆ ಭೇಟಿ ನೀಡಿ ರಸಗೊಬ್ಬರಗಳ ಮಾಹಿತಿ ಪಡೆದು, ಸರಿಯಾದ ಚಿಲ್ಲರೆ ಹಾಗೂ ಸಗಟು ಮಾರಾಟದ ಮಾಹಿತಿ ಫಲಕವನ್ನು ಹಾಕದೇ ಇರುವುದಕ್ಕೆ ಕಾರ್ಯ ನಿರ್ವಹಣಾಧಿಕಾರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.

ನೇರವಾಗಿ ಟ್ರೇಡರ್ಸ್ ಹಾಗೂ ಸೊಸೈಟಿ ಮೂಲಕ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು, ಕಾಳ ಸಂತೆಯಲ್ಲಿ ಮಾರಾಟ ಆಗದ ಹಾಗೆ ಎಚ್ಚರವಹಿಸಬೇಕು, ರೈತರಿಗೆ ಯೂರಿಯ ಸಮಸ್ಯೆ ಎದುರಾಗಬಾರದು ಎಂದರು.ಪಟ್ಟಣದ ಕೋಡಿಲಿಂಗೇಶ್ವರ ಟ್ರೇಡರ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅಳತೆ ಸರಿ ಇಲ್ಲವೆಂಬುದನ್ನು ಪರಿಶೀಲಿಸಿದ ತಹಸಿಲ್ದಾರ್ ಅವರು, ಅಲ್ಲೇ ಇದ್ದಂತಹ ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ ಅವರಿಗೆ ಇವರ ಪರವಾನಗಿಯನ್ನು ರದ್ದು ಮಾಡಬೇಕು ಎಂದು ಸೂಚಿಸಿದರು.

ಸಹಾಯಕ ಕೃಷಿ ನಿರ್ದೇಶಕಿ ಎಚ್.ಬಿ.ಪ್ರತಿಭಾ, ರಾಜಸ್ವ ನಿರೀಕ್ಷಕ ಮೋಹನ್, ಗ್ರಾಮಾಡಳಿತಾಧಿಕಾರಿ ಹರೀಶ್, ಷಣ್ಮುಖ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago