fertilize black market
ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ ತಹಸಿಲ್ದಾರ್ ಪರಶುರಾಮ್ ಸತ್ತಿಗೇರಿ ಎಚ್ಚರಿಕೆ ನೀಡಿದರು.
ಪಟ್ಟಣದ ಟಿಎಪಿಸಿಎಂಎಸ್ ದಾಸ್ತಾನು ಗೋಡೌನ್ಗೆ ಭೇಟಿ ನೀಡಿ ರಸಗೊಬ್ಬರಗಳ ಮಾಹಿತಿ ಪಡೆದು, ಸರಿಯಾದ ಚಿಲ್ಲರೆ ಹಾಗೂ ಸಗಟು ಮಾರಾಟದ ಮಾಹಿತಿ ಫಲಕವನ್ನು ಹಾಕದೇ ಇರುವುದಕ್ಕೆ ಕಾರ್ಯ ನಿರ್ವಹಣಾಧಿಕಾರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.
ನೇರವಾಗಿ ಟ್ರೇಡರ್ಸ್ ಹಾಗೂ ಸೊಸೈಟಿ ಮೂಲಕ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು, ಕಾಳ ಸಂತೆಯಲ್ಲಿ ಮಾರಾಟ ಆಗದ ಹಾಗೆ ಎಚ್ಚರವಹಿಸಬೇಕು, ರೈತರಿಗೆ ಯೂರಿಯ ಸಮಸ್ಯೆ ಎದುರಾಗಬಾರದು ಎಂದರು.ಪಟ್ಟಣದ ಕೋಡಿಲಿಂಗೇಶ್ವರ ಟ್ರೇಡರ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅಳತೆ ಸರಿ ಇಲ್ಲವೆಂಬುದನ್ನು ಪರಿಶೀಲಿಸಿದ ತಹಸಿಲ್ದಾರ್ ಅವರು, ಅಲ್ಲೇ ಇದ್ದಂತಹ ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ ಅವರಿಗೆ ಇವರ ಪರವಾನಗಿಯನ್ನು ರದ್ದು ಮಾಡಬೇಕು ಎಂದು ಸೂಚಿಸಿದರು.
ಸಹಾಯಕ ಕೃಷಿ ನಿರ್ದೇಶಕಿ ಎಚ್.ಬಿ.ಪ್ರತಿಭಾ, ರಾಜಸ್ವ ನಿರೀಕ್ಷಕ ಮೋಹನ್, ಗ್ರಾಮಾಡಳಿತಾಧಿಕಾರಿ ಹರೀಶ್, ಷಣ್ಮುಖ ಉಪಸ್ಥಿತರಿದ್ದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…