ಮಂಡ್ಯ

ರಸಗೊಬ್ಬರ ದಾಸ್ತಾನು ಮಳಿಗೆಗೆ ತಹಸಿಲ್ದಾರ್ ದಿಢೀರ್‌ ಭೇಟಿ

ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ ತಹಸಿಲ್ದಾರ್ ಪರಶುರಾಮ್ ಸತ್ತಿಗೇರಿ ಎಚ್ಚರಿಕೆ ನೀಡಿದರು.

ಪಟ್ಟಣದ ಟಿಎಪಿಸಿಎಂಎಸ್ ದಾಸ್ತಾನು ಗೋಡೌನ್‌ಗೆ ಭೇಟಿ ನೀಡಿ ರಸಗೊಬ್ಬರಗಳ ಮಾಹಿತಿ ಪಡೆದು, ಸರಿಯಾದ ಚಿಲ್ಲರೆ ಹಾಗೂ ಸಗಟು ಮಾರಾಟದ ಮಾಹಿತಿ ಫಲಕವನ್ನು ಹಾಕದೇ ಇರುವುದಕ್ಕೆ ಕಾರ್ಯ ನಿರ್ವಹಣಾಧಿಕಾರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.

ನೇರವಾಗಿ ಟ್ರೇಡರ್ಸ್ ಹಾಗೂ ಸೊಸೈಟಿ ಮೂಲಕ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು, ಕಾಳ ಸಂತೆಯಲ್ಲಿ ಮಾರಾಟ ಆಗದ ಹಾಗೆ ಎಚ್ಚರವಹಿಸಬೇಕು, ರೈತರಿಗೆ ಯೂರಿಯ ಸಮಸ್ಯೆ ಎದುರಾಗಬಾರದು ಎಂದರು.ಪಟ್ಟಣದ ಕೋಡಿಲಿಂಗೇಶ್ವರ ಟ್ರೇಡರ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅಳತೆ ಸರಿ ಇಲ್ಲವೆಂಬುದನ್ನು ಪರಿಶೀಲಿಸಿದ ತಹಸಿಲ್ದಾರ್ ಅವರು, ಅಲ್ಲೇ ಇದ್ದಂತಹ ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ ಅವರಿಗೆ ಇವರ ಪರವಾನಗಿಯನ್ನು ರದ್ದು ಮಾಡಬೇಕು ಎಂದು ಸೂಚಿಸಿದರು.

ಸಹಾಯಕ ಕೃಷಿ ನಿರ್ದೇಶಕಿ ಎಚ್.ಬಿ.ಪ್ರತಿಭಾ, ರಾಜಸ್ವ ನಿರೀಕ್ಷಕ ಮೋಹನ್, ಗ್ರಾಮಾಡಳಿತಾಧಿಕಾರಿ ಹರೀಶ್, ಷಣ್ಮುಖ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

37 mins ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

12 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

12 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

12 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

13 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

13 hours ago