ಮಂಡ್ಯ

ರಸಗೊಬ್ಬರ ದಾಸ್ತಾನು ಮಳಿಗೆಗೆ ತಹಸಿಲ್ದಾರ್ ದಿಢೀರ್‌ ಭೇಟಿ

ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ ತಹಸಿಲ್ದಾರ್ ಪರಶುರಾಮ್ ಸತ್ತಿಗೇರಿ ಎಚ್ಚರಿಕೆ ನೀಡಿದರು.

ಪಟ್ಟಣದ ಟಿಎಪಿಸಿಎಂಎಸ್ ದಾಸ್ತಾನು ಗೋಡೌನ್‌ಗೆ ಭೇಟಿ ನೀಡಿ ರಸಗೊಬ್ಬರಗಳ ಮಾಹಿತಿ ಪಡೆದು, ಸರಿಯಾದ ಚಿಲ್ಲರೆ ಹಾಗೂ ಸಗಟು ಮಾರಾಟದ ಮಾಹಿತಿ ಫಲಕವನ್ನು ಹಾಕದೇ ಇರುವುದಕ್ಕೆ ಕಾರ್ಯ ನಿರ್ವಹಣಾಧಿಕಾರಿಗೆ ನೋಟಿಸ್ ನೀಡುವಂತೆ ಆದೇಶಿಸಿದರು.

ನೇರವಾಗಿ ಟ್ರೇಡರ್ಸ್ ಹಾಗೂ ಸೊಸೈಟಿ ಮೂಲಕ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು, ಕಾಳ ಸಂತೆಯಲ್ಲಿ ಮಾರಾಟ ಆಗದ ಹಾಗೆ ಎಚ್ಚರವಹಿಸಬೇಕು, ರೈತರಿಗೆ ಯೂರಿಯ ಸಮಸ್ಯೆ ಎದುರಾಗಬಾರದು ಎಂದರು.ಪಟ್ಟಣದ ಕೋಡಿಲಿಂಗೇಶ್ವರ ಟ್ರೇಡರ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅಳತೆ ಸರಿ ಇಲ್ಲವೆಂಬುದನ್ನು ಪರಿಶೀಲಿಸಿದ ತಹಸಿಲ್ದಾರ್ ಅವರು, ಅಲ್ಲೇ ಇದ್ದಂತಹ ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ ಅವರಿಗೆ ಇವರ ಪರವಾನಗಿಯನ್ನು ರದ್ದು ಮಾಡಬೇಕು ಎಂದು ಸೂಚಿಸಿದರು.

ಸಹಾಯಕ ಕೃಷಿ ನಿರ್ದೇಶಕಿ ಎಚ್.ಬಿ.ಪ್ರತಿಭಾ, ರಾಜಸ್ವ ನಿರೀಕ್ಷಕ ಮೋಹನ್, ಗ್ರಾಮಾಡಳಿತಾಧಿಕಾರಿ ಹರೀಶ್, ಷಣ್ಮುಖ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

33 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago