ಮಂಡ್ಯ

ದೇವಾಲಯ ವಾಸ್ತುಶಿಲ್ಪ ಪದವಿ ಕಾಲೇಜು ಅಗತ್ಯ: ಶಿಲ್ಪಿ ಅರುಣ್‌ ಯೋಗಿರಾಜ್‌

ಮಂಡ್ಯ: ರಾಜ್ಯದಲ್ಲಿ ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಶಿಲ್ಪಿ ಅರುಣ್‌  ಯೋಗಿರಾಜ್‌ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ವತಿಯಿಂದ ನಿರ್ಮಾಣವಾಗುವ ದೇವಸ್ಥಾನ  ಅಥವಾ ಪುನರ್ ಸ್ಥಾಪನೆ ಕೆಲಸ ಮಾಡಬೇಕೆಂದರೆ ದೇವಾಲಯ ವಾಸ್ತು ಶಿಲ್ಪ ಕಲೆಯ ಪದವಿ ಪ್ರಮಾಣ ಪತ್ರವನ್ನು ನೀಡಬೇಕು ಎಂಬ ನಿಯಮವಿದೆ.  ಈ ನಿಟ್ಟಿನಲ್ಲಿ  ರಾಜ್ಯದಲ್ಲಿ  ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ. ಕೆಲಸದಲ್ಲಿ ಏಷ್ಟೇ ಪರಿಣಿತರಾದರು ಪದವಿ ಪ್ರಮಾಣ ಪತ್ರವಿಲ್ಲದಿದ್ದರೆ ಕೆಲಸ ಮಾಡಲು ಅರ್ಹತೆ ಇರುವುದಿಲ್ಲ ಎಂದರು.

ಶಿಲ್ಪಕಲೆಯ ನಾಡಾದ  ನಮ್ಮ ರಾಜ್ಯದಲ್ಲಿ ದೇವಾಲಯ ವಾಸ್ತುಶಿಲ್ಪಕಲೆ ಕಾಲೇಜು ತೆರೆದು ಪದವಿ ನೀಡಿದರೆ ಅನೇಕ ಕೆಲಸಗಳು ನಮ್ಮ ಕರ್ನಾಟಕ ಜನಕ್ಕೆ ದೊರೆಯುತ್ತದೆ ಎಂದರು.

ಶಿಲ್ಪಿಗಳು ಶತಮಾನಗಳಿಂದ ದೇಶಕ್ಕೆ ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದೇವೆ. ಅದರಲ್ಲಿ ಅಗ್ರಗಣ್ಯರು ಅಮರಶಿಲ್ಪಿ ಜಕಣಾಚಾರ್ಯರು. ಅವರು ನಿರ್ಮಿಸಿರುವ ದೇವಾಲಯಗಳು ಇವತ್ತಿಗೂ ತನ್ನ ಕಲೆ ಮಾಸಿ ಹೋಗದಂತೆ ತನ್ನ ಅಸ್ತಿತ್ವ ಕಾಪಾಡಿಕೊಂಡಿವೆ. ಶಿಲ್ಪಿಗಳು ನಿರ್ಮಿಸುವ ವಿಗ್ರಹ ಅವರು ಸತ್ತ ನಂತರವೂ ಪೂಜೆಗೊಳಪಡುತ್ತದೆ, ನನಗೆ ಬೆಲೆ ಕೊಡುತ್ತಿರುವುದು ನಾನೊಬ್ಬ ಶಿಲ್ಪಿ ಎಂದೆಲ್ಲಾ ನಾನು ಮಾಡಿದ ಕೆಲಸಕ್ಕೆ ಅದರ ಹಿಂದೆ ಇರುವ ಕಲೆ ಶ್ರಮಕ್ಕೆ ಮತ್ತು ಅದರ ಇತಿಹಾಸಕ್ಕೆ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಮಾತನಾಡಿ, ಅರುಣ್ ಯೋಗಿರಾಜ ತುಂಬಾ ಪರಿಶ್ರಮ ಪಟ್ಟು ಅಯೋಧ್ಯೆಯಲ್ಲಿ ಸುಂದರವಾದ ರಾಮ ಮೂರ್ತಿಯನ್ನು ಕೆತ್ತಿ ಇಡೀ ವಿಶ್ವದಲ್ಲೇ ಹೆಸರು ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

ರೈತರ ಕುಡುಗೋಲು ತಟ್ಟಿಸುವುದರಿಂದ ಹಿಡಿದು ಸಾಮಾನ್ಯ ವ್ಯಕ್ತಿಗಳು ಮನೆ ನಿರ್ಮಾಣ ಮಾಡುವುದಕ್ಕೂ ನಿಮ್ಮ ಕಸುಬುಗಳ ಅಗತ್ಯವಿದೆ ಇಂತಹ ಉತ್ತಮ ಸೇವೆಯನ್ನು ಸಾಮಾಜಕ್ಕೆ ಸಲ್ಲಿಸುತ್ತಿರುವ ವಿಶ್ವಕರ್ಮ ಜನಾಂಗದ ಬಗ್ಗೆ ಗೌರವ ಇದೆ ಎಂದರು.

ಕಾರ್ಯಕ್ರಮದಲ್ಲಿ ನಗರರಸಭೆ ಅಧ್ಯಕ್ಷ ಎಂ ಪಿ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ ವಿ ನಂದೀಶ್, ಸಾಹಿತಿ ಕೆ.ಪಿ ಸ್ವಾಮಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

43 mins ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

1 hour ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

5 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

5 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

5 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

5 hours ago