ಮಂಡ್ಯ

ದೇವಾಲಯ ವಾಸ್ತುಶಿಲ್ಪ ಪದವಿ ಕಾಲೇಜು ಅಗತ್ಯ: ಶಿಲ್ಪಿ ಅರುಣ್‌ ಯೋಗಿರಾಜ್‌

ಮಂಡ್ಯ: ರಾಜ್ಯದಲ್ಲಿ ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಶಿಲ್ಪಿ ಅರುಣ್‌  ಯೋಗಿರಾಜ್‌ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ವತಿಯಿಂದ ನಿರ್ಮಾಣವಾಗುವ ದೇವಸ್ಥಾನ  ಅಥವಾ ಪುನರ್ ಸ್ಥಾಪನೆ ಕೆಲಸ ಮಾಡಬೇಕೆಂದರೆ ದೇವಾಲಯ ವಾಸ್ತು ಶಿಲ್ಪ ಕಲೆಯ ಪದವಿ ಪ್ರಮಾಣ ಪತ್ರವನ್ನು ನೀಡಬೇಕು ಎಂಬ ನಿಯಮವಿದೆ.  ಈ ನಿಟ್ಟಿನಲ್ಲಿ  ರಾಜ್ಯದಲ್ಲಿ  ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ. ಕೆಲಸದಲ್ಲಿ ಏಷ್ಟೇ ಪರಿಣಿತರಾದರು ಪದವಿ ಪ್ರಮಾಣ ಪತ್ರವಿಲ್ಲದಿದ್ದರೆ ಕೆಲಸ ಮಾಡಲು ಅರ್ಹತೆ ಇರುವುದಿಲ್ಲ ಎಂದರು.

ಶಿಲ್ಪಕಲೆಯ ನಾಡಾದ  ನಮ್ಮ ರಾಜ್ಯದಲ್ಲಿ ದೇವಾಲಯ ವಾಸ್ತುಶಿಲ್ಪಕಲೆ ಕಾಲೇಜು ತೆರೆದು ಪದವಿ ನೀಡಿದರೆ ಅನೇಕ ಕೆಲಸಗಳು ನಮ್ಮ ಕರ್ನಾಟಕ ಜನಕ್ಕೆ ದೊರೆಯುತ್ತದೆ ಎಂದರು.

ಶಿಲ್ಪಿಗಳು ಶತಮಾನಗಳಿಂದ ದೇಶಕ್ಕೆ ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದೇವೆ. ಅದರಲ್ಲಿ ಅಗ್ರಗಣ್ಯರು ಅಮರಶಿಲ್ಪಿ ಜಕಣಾಚಾರ್ಯರು. ಅವರು ನಿರ್ಮಿಸಿರುವ ದೇವಾಲಯಗಳು ಇವತ್ತಿಗೂ ತನ್ನ ಕಲೆ ಮಾಸಿ ಹೋಗದಂತೆ ತನ್ನ ಅಸ್ತಿತ್ವ ಕಾಪಾಡಿಕೊಂಡಿವೆ. ಶಿಲ್ಪಿಗಳು ನಿರ್ಮಿಸುವ ವಿಗ್ರಹ ಅವರು ಸತ್ತ ನಂತರವೂ ಪೂಜೆಗೊಳಪಡುತ್ತದೆ, ನನಗೆ ಬೆಲೆ ಕೊಡುತ್ತಿರುವುದು ನಾನೊಬ್ಬ ಶಿಲ್ಪಿ ಎಂದೆಲ್ಲಾ ನಾನು ಮಾಡಿದ ಕೆಲಸಕ್ಕೆ ಅದರ ಹಿಂದೆ ಇರುವ ಕಲೆ ಶ್ರಮಕ್ಕೆ ಮತ್ತು ಅದರ ಇತಿಹಾಸಕ್ಕೆ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಮಾತನಾಡಿ, ಅರುಣ್ ಯೋಗಿರಾಜ ತುಂಬಾ ಪರಿಶ್ರಮ ಪಟ್ಟು ಅಯೋಧ್ಯೆಯಲ್ಲಿ ಸುಂದರವಾದ ರಾಮ ಮೂರ್ತಿಯನ್ನು ಕೆತ್ತಿ ಇಡೀ ವಿಶ್ವದಲ್ಲೇ ಹೆಸರು ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

ರೈತರ ಕುಡುಗೋಲು ತಟ್ಟಿಸುವುದರಿಂದ ಹಿಡಿದು ಸಾಮಾನ್ಯ ವ್ಯಕ್ತಿಗಳು ಮನೆ ನಿರ್ಮಾಣ ಮಾಡುವುದಕ್ಕೂ ನಿಮ್ಮ ಕಸುಬುಗಳ ಅಗತ್ಯವಿದೆ ಇಂತಹ ಉತ್ತಮ ಸೇವೆಯನ್ನು ಸಾಮಾಜಕ್ಕೆ ಸಲ್ಲಿಸುತ್ತಿರುವ ವಿಶ್ವಕರ್ಮ ಜನಾಂಗದ ಬಗ್ಗೆ ಗೌರವ ಇದೆ ಎಂದರು.

ಕಾರ್ಯಕ್ರಮದಲ್ಲಿ ನಗರರಸಭೆ ಅಧ್ಯಕ್ಷ ಎಂ ಪಿ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ ವಿ ನಂದೀಶ್, ಸಾಹಿತಿ ಕೆ.ಪಿ ಸ್ವಾಮಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

2 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

2 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

3 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

3 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

4 hours ago