ಮಂಡ್ಯ

ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ: ಮೂವರ ಸಾವು

 ತಿರುಪತಿಯಿಂದ ವಾಪಸ್ಸಾಗುತ್ತಿದ್ದ ಚಿಕ್ಕಾಡೆಯ ನತದೃಷ್ಟರು

ಪಾಂಡವಪುರ: ತಿರುಪತಿಗೆ ಹೋಗಿ ವಾಪಸ್ ಬರುವಾಗ ಚನ್ನಪಟ್ಟಣದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಾಡೆ ಗ್ರಾಮದ ಕೃಷ್ಣೇಗೌಡ (48), ಪುತ್ರ ಶ್ರೀನಿವಾಸ್(14), ಮಹೇಶ್(48) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೃಷ್ಣೇಗೌಡರ ಎರಡನೇ ಪುತ್ರ ಪುರುಷೋತ್ತಮ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಶಕುಂತಲ, ಕೃಷ್ಣೇಗೌಡರ ಪತ್ನಿ ಶೈಲಜಾ ಅವರು ಗಾಯಗೊಂಡಿದ್ದಾರೆ.

ಚಿಕ್ಕಾಡೆ ಗ್ರಾಮದಿಂದ ತಿರುಪತಿ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ವಾಪಸ್ಸಾಗುವ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿಯ ಮುದುಗೆರೆ ಗೇಟ್ ಬಳಿ ಶನಿವಾರ ಮುಂಜಾನೆ 5 ಗಂಟೆಯ ಸುಮಾರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೃಷ್ಣೇಗೌಡ, ಅವರ ಪುತ್ರ ಶ್ರೀನಿವಾಸ್ ಹಾಗೂ ಮಹೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

       ಕೃಷ್ಣೇಗೌಡರ ಎರಡನೇ ಪುತ್ರ ಪುರುಷೋತ್ತಮ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಕುಂತಲ, ಮೃತ ಕೃಷ್ಣೇಗೌಡ ಪತ್ನಿ ಶೈಲಜಾ ಅವರಿಗೆ ಗಾಯವಾಗಿದೆ.
ವಿಷಯ ತಿಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಶನಿವಾರ ಬೆಳಿಗ್ಗೆ ಚಿಕ್ಕಾಡೆ ಗ್ರಾಮಕ್ಕೆ ತೆರಳಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

   ಬಳಿಕ ಪಂಚರತ್ನ ರಥಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್‌ಕುಮಾರ್‌ಸ್ವಾಮಿ ಅವರನ್ನು ಶಾಸಕ ಸಿ.ಎಸ್.ಪುಟ್ಟರಾಜು ಅವರು ಮೃತರ ಮನೆಗೆ ಕರೆದುಕೊಂಡು ಹೋಗಿ ಸಾಂತ್ವಾನ ಹೇಳಿ ಧೈರ್ಯತುಂಬಿದರು. ಮಾಜಿ ಸಿಎಂ ಎಚ್‌ಡಿಕೆ ಆಗಮಿಸುತ್ತಿದ್ದಂತೆಯೇ ಮೃತರ ಕುಟುಂಬಸ್ಥರು ಎಚ್‌ಡಿಕೆ ಮುಂದೆ ಅಳಲು ತೋಡಿಕೊಂಡರು.

ಮೃತರ ಕುಟುಂಬಸ್ಥರನ್ನು ಕಂಡು ಮಾಜಿ ಸಿಎಂ ಎಚ್‌ಡಿಕೆ ಸಂತೈಸಿದರು. ಶಾಸಕ ಸಿ.ಎಸ್.ಪುಟ್ಟರಾಜು ಪಂಚರತ್ನ ಯಾತ್ರೆ ಮುಗಿದ ಬಳಿಕ ಕುಟುಂಬಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಸಿ.ಪಿ.ಶಿವರಾಜು ಅವರು ಅಪಘಾತದಲ್ಲಿ ಗಾಯಗೊಂಡ ಮೃತ ಕೃಷ್ಣೇಗೌಡರ ಪುತ್ರ ಪುರುಷೋತ್ತಮ್ ಚಿಕಿತ್ಸೆಗೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಆ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಲೀಲಾವತಿ ಅವರ ಮನೆಗೂ ಭೇಟಿ ನೀಡಿದ ಎಚ್‌ಡಿಕೆ, ನಿಖಿಲ್, ಸಿ.ಎಸ್.ಪುಟ್ಟರಾಜು ಅವರು ಸಾಂತ್ವಾನ ಹೇಳಿದರು.

 

andolana

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

27 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago