ಮಂಡ್ಯ

ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ: ಮೂವರ ಸಾವು

 ತಿರುಪತಿಯಿಂದ ವಾಪಸ್ಸಾಗುತ್ತಿದ್ದ ಚಿಕ್ಕಾಡೆಯ ನತದೃಷ್ಟರು

ಪಾಂಡವಪುರ: ತಿರುಪತಿಗೆ ಹೋಗಿ ವಾಪಸ್ ಬರುವಾಗ ಚನ್ನಪಟ್ಟಣದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಾಡೆ ಗ್ರಾಮದ ಕೃಷ್ಣೇಗೌಡ (48), ಪುತ್ರ ಶ್ರೀನಿವಾಸ್(14), ಮಹೇಶ್(48) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೃಷ್ಣೇಗೌಡರ ಎರಡನೇ ಪುತ್ರ ಪುರುಷೋತ್ತಮ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಶಕುಂತಲ, ಕೃಷ್ಣೇಗೌಡರ ಪತ್ನಿ ಶೈಲಜಾ ಅವರು ಗಾಯಗೊಂಡಿದ್ದಾರೆ.

ಚಿಕ್ಕಾಡೆ ಗ್ರಾಮದಿಂದ ತಿರುಪತಿ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ವಾಪಸ್ಸಾಗುವ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿಯ ಮುದುಗೆರೆ ಗೇಟ್ ಬಳಿ ಶನಿವಾರ ಮುಂಜಾನೆ 5 ಗಂಟೆಯ ಸುಮಾರಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೃಷ್ಣೇಗೌಡ, ಅವರ ಪುತ್ರ ಶ್ರೀನಿವಾಸ್ ಹಾಗೂ ಮಹೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

       ಕೃಷ್ಣೇಗೌಡರ ಎರಡನೇ ಪುತ್ರ ಪುರುಷೋತ್ತಮ್ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಕುಂತಲ, ಮೃತ ಕೃಷ್ಣೇಗೌಡ ಪತ್ನಿ ಶೈಲಜಾ ಅವರಿಗೆ ಗಾಯವಾಗಿದೆ.
ವಿಷಯ ತಿಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಶನಿವಾರ ಬೆಳಿಗ್ಗೆ ಚಿಕ್ಕಾಡೆ ಗ್ರಾಮಕ್ಕೆ ತೆರಳಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

   ಬಳಿಕ ಪಂಚರತ್ನ ರಥಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್‌ಕುಮಾರ್‌ಸ್ವಾಮಿ ಅವರನ್ನು ಶಾಸಕ ಸಿ.ಎಸ್.ಪುಟ್ಟರಾಜು ಅವರು ಮೃತರ ಮನೆಗೆ ಕರೆದುಕೊಂಡು ಹೋಗಿ ಸಾಂತ್ವಾನ ಹೇಳಿ ಧೈರ್ಯತುಂಬಿದರು. ಮಾಜಿ ಸಿಎಂ ಎಚ್‌ಡಿಕೆ ಆಗಮಿಸುತ್ತಿದ್ದಂತೆಯೇ ಮೃತರ ಕುಟುಂಬಸ್ಥರು ಎಚ್‌ಡಿಕೆ ಮುಂದೆ ಅಳಲು ತೋಡಿಕೊಂಡರು.

ಮೃತರ ಕುಟುಂಬಸ್ಥರನ್ನು ಕಂಡು ಮಾಜಿ ಸಿಎಂ ಎಚ್‌ಡಿಕೆ ಸಂತೈಸಿದರು. ಶಾಸಕ ಸಿ.ಎಸ್.ಪುಟ್ಟರಾಜು ಪಂಚರತ್ನ ಯಾತ್ರೆ ಮುಗಿದ ಬಳಿಕ ಕುಟುಂಬಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಸಿ.ಪಿ.ಶಿವರಾಜು ಅವರು ಅಪಘಾತದಲ್ಲಿ ಗಾಯಗೊಂಡ ಮೃತ ಕೃಷ್ಣೇಗೌಡರ ಪುತ್ರ ಪುರುಷೋತ್ತಮ್ ಚಿಕಿತ್ಸೆಗೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಆ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಲೀಲಾವತಿ ಅವರ ಮನೆಗೂ ಭೇಟಿ ನೀಡಿದ ಎಚ್‌ಡಿಕೆ, ನಿಖಿಲ್, ಸಿ.ಎಸ್.ಪುಟ್ಟರಾಜು ಅವರು ಸಾಂತ್ವಾನ ಹೇಳಿದರು.

 

andolana

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

5 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

7 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

9 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

10 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

13 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

13 hours ago