ಮಂಡ್ಯ

ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ಮಂಡ್ಯ : ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಿ” ಎಂದು ವಿದ್ಯಾರ್ಥಿಗಳಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಈ ವಿಶೇಷ ದಿನ, ಇದು ನಿಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ನಿಮ್ಮ ಜೀವನವನ್ನು ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದ ಈ ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಆಡಳಿತ ಸಿಬ್ಬಂದಿ ಮತ್ತು ಪೋಷಕರನ್ನು ಗೌರವಿಸಿ ಎಂದರು.

“ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ, ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯಪೂರ್ಣರಾಗುವ ಮೂಲಕ ನಾವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಶಿಕ್ಷಣದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜೀವನ ಪೂರ್ತಿ ಕಲಿಕೆ ನಿರಂತರವಾಗಿರಲಿ. ಇದು ನಿಮ್ಮ ಯಶಸ್ಸಿಗೆ ಹಾದಿಯಾಗಲಿದೆ” ಎಂದು ಹೇಳಿದರು.

ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಹೆಚ್ಚಾಗುತ್ತಿವೆ. ಈ ಜಾಗತಿಕ ಸವಾಲುಗಳ ಪರಿಹಾರಕ್ಕೆ ಕೊಡುಗೆ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮುಂದಾಗಬೇಕು ಹಾಗೂ ಹಾಗೂ ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಬೇಕು ಎಂದು ತಿಳಿಸಿದರು.

ಪ್ರಾಚೀನ ಕಾಲದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆ, ನಮ್ಮ ಜ್ಞಾನ, ವಿಜ್ಞಾನ ಕೊಡುಗೆಯೊಂದಿಗೆ, ಭಾರತವು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿತ್ತು ಮತ್ತು ಬಲವಾದ ಆರ್ಥಿಕತೆಯಿಂದಾಗಿ ಆರ್ಥಿಕವಾಗಿ ಸಮೃದ್ಧವಾಗಿತ್ತು ಎಂಬ ಕಾರಣಕ್ಕಾಗಿ ನಮ್ಮ ಭಾರತವನ್ನು “ವಿಶ್ವ ಗುರು” ಮತ್ತು “ಸೋನೆ ಕಿ ಚಿಡಿಯಾ” ಎಂದು ಕರೆಯಲಾಗುತ್ತಿತ್ತು ಎಂದು ಎಲ್ಲರಿಗೂ ತಿಳಿದಿದೆ. ಪ್ರಾಚೀನ ಭಾರತೀಯ ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡದ ವೈಜ್ಞಾನಿಕ ತತ್ವಗಳನ್ನು ಅರ್ಥಮಾಡಿಕೊಂಡರು. ಭಾರತೀಯ ಖಗೋಳಶಾಸ್ತ್ರದ ಬೇರುಗಳು ವೇದಗಳಲ್ಲಿ ಕಂಡುಬರುತ್ತವೆ. ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದಗಳಲ್ಲಿ ಖಗೋಳ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗಣಿತಶಾಸ್ತ್ರದಲ್ಲಿ, ಶೂನ್ಯ ಮತ್ತು ದಶಮಾಂಶ ಸಂಖ್ಯೆಗಳನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ ” ಎಂದು ಹೇಳಿದರು.

“ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ನೀವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನಿಮ್ಮನ್ನು ನವೀಕರಿಸಿಕೊಳ್ಳಬೇಕು” ಎಂದು ತಿಳಿಸಿದರು.

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್‌ಎಸ್‌ಎಚ್‌ಎಂ ಜ್ಞಾನ ಕ್ಯಾಂಪಸ್‌ನ ನಿರ್ದೇಶಕ ಪ್ರೊ.ಸೌಮೇಂದ್ರನಾಥ್ ಬಂಡೋಪಾಧ್ಯಾಯ, ಕುಲಪತಿ ಪ್ರೊ.ಕೆ.ಶಿವಚಿತಪ್ಪ, ಇತರ ಗಣ್ಯರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುಪಿಯಲ್ಲೊಂದು ಅಪರೂಪದ ಘಟನೆ : ಗ್ಯಾಸ್‌ ಓಟಿಪಿ ವ್ಯಕ್ತಿ ಜೀವ ಉಳಿಸಿದ್ದೇಗೆ?

ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ…

13 mins ago

ಪತಿ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ನಟಿ

ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …

54 mins ago

ಇರಾನ್‌ಗೆ ತೆರಳಲಾಗದೆ ಕೊಡಗಿನಲ್ಲಿ ಸಿಲುಕಿದ ದಂಪತಿ

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…

2 hours ago

ಬಿಜೆಪಿ-ಆರ್‌ಎಸ್‌ಎಸ್-ಮೋದಿ ವಿರುದ್ಧ ಏನೆಲ್ಲಾ ಮಾತಾಡಿದ್ದಾರೆ ಗೊತ್ತಾ? ; ಸಿಎಂ ಹೀಗಂದಿದ್ಯಾರಿಗೆ

ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…

3 hours ago

ಅಮೇರಿಕಾ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆ

ಟೆಹರಾನ್:‌ ಅಮೇರಿಕಾ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆಯಾಗಿದ್ದಾರೆ…

4 hours ago