ಮಂಡ್ಯ: ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಪರಿಸರವನ್ನು ಉಳಿಸಬೇಕು ಪ್ರತಿ ಮನೆಗಳಲ್ಲು ಕೂಡ ಚಿಕ್ಕ ಮಕ್ಕಳಿಗೆ ಪರಿಸರವನ್ನು ಉಳಿಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.
ಅವರು ಇಂದು(ಜೂ.೬) ಮಂಡ್ಯ ಮಿಮ್ಸ್ ಇ ಎನ್ ಟಿ ವಿಭಾಗದ ಉಪನ್ಯಾಸ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಉದ್ಘಾಟನಾ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು.
ಜಗತ್ತು ಸೌಂದರ್ಯ ವಾಗಿರಬೇಕು ಎಂದರೆ ಮೊದಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಚನ್ನಾಗಿ ಇಟ್ಟುಕೊಳ್ಳಬೇಕು ಕಾರಣ ಜಗತ್ತಿನ ಸೌಂದರ್ಯ ಅಡಗಿರುವುದು ಪರಿಶುದ್ಧವಾದ ಪರಿಸರದಲ್ಲಿ, ನಾವು ಸುಂದರವಾಗಿ ಇದ್ದರೆ ಸಾಲದು ನಮಗೆ ಗಾಳಿ, ಬೆಳಕು ನೀಡುವ ಪರಿಸರವನ್ನು ನಾಶವಾಗದಂತೆ ನೋಡಿಕೊಳ್ಳಬೇಕು ಎಂದರು.
ನಮ್ಮ ಮುಂದಿನ ಭವಿಷ್ಯ ಚನ್ನಾಗಿ ಇರಬೇಕು ಅಂದರೆ ಮೊದಲು ನಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ನಮ್ಮ ಸಂಸ್ಕೃತಿಯನ್ನು ನಶಿಸಿ ಹೋಗದಂತೆ ಕಾಪಾಡಿ ಕೊಳ್ಳಬೇಕು. ಸಂಸ್ಕೃತಿ ಹಾಗೂ ಪರಿಸರ ಉಳಿದರೆ ಮುಂದಿನ ಪೀಳಿಗೆಯ ಜೀವನದ ಕೂಡ ಸುಖಕರವಾಗಿರುತ್ತದೆ ಎಂದು ಪ್ರತಿಪಾದಿಸಿದರು.
ಮನುಷ್ಯ ಎಷ್ಟು ಸ್ವಾರ್ಥಿ ಎಂದರೆ ಆತನ ದುರ್ಬುದ್ಧಿ ಯಿಂದಾಗಿ ಪರಿಸರ ನಾಶವಾಗುತ್ತಿದೆ ಇದೇ ಮುಂದುವರೆಯುತ್ತ ಹೋದರೆ ನಮ್ಮ ಮುಂದಿನ ಪೀಳಿಗೆಗೆ ಟಿವಿಗಳಲ್ಲಿ ತೋರಿಸಬೇಕಾಗುತ್ತದೆ ಇಂತಹ ಮರಗಳು ಇದ್ದವು ಇಂತಹ ಪ್ರಾಣಿಗಳು ಇದ್ದವು ಎಂದು ದಯವಿಟ್ಟು ಅಂತಹ ಒಂದು ಸಂದರ್ಭ ಸೃಷ್ಟಿ ಆಗದ ರೀತಿಯಲ್ಲಿ ನೋಡಿಕೊಂಡು ಪ್ರತಿಯೊಬ್ಬರು ಪರಿಸರವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.
ಹುಟ್ಟು ಹಬ್ಬ ಆಚರಣೆಯ ದಿನದಂದು ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡುವುದರ ಜೊತೆಗೆ ಒಂದು ಗಿಡ ನೆಟ್ಟಿ ಸಂಭ್ರಮಾಚರಣೆ ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ , ಮಾನವ ತನ್ನ ಅಹಂ ನಿಂದ ಮರ ಗಿಡಗಳನ್ನು ನಾಶ ಮಾಡಿ ಮೂರ್ಖನಾಗದೇ ನಾನು ನಾನು ಎನ್ನುವ ಗರ್ವ ಬಿಟ್ಟು ಪರಿಸರ ರಕ್ಷಿಸುವಲ್ಲಿ ಮುಂದಾಗಬೇಕು ಎಂದು ಹೇಳಿದರು.
ಪ್ರಕೃತಿ ನಮ್ಮ ಬದುಕಿನ ಭಾಗವಲ್ಲ, ನಾವು ಪ್ರಕೃತಿಯ ಒಂದು ಭಾಗ ಆದ್ದರಿಂದ ಪ್ರಕೃತಿಯ ಒಂದಂಶವಾದ ನಾವುಗಳು ಪ್ರಕೃತಿಯ ಉಳಿವಿಗೆ ಕಾರಣವಾಗಬೇಕೆ ವಿನಃ ಪ್ರಕೃತಿಯ ಅಳಿವಿಗೆ ಕಾರಣವಾಗಬಾರದು ಎಂದರು
ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಿ ಪರಿಸರ ರಕ್ಷಣೆ ಮಾಡಬೇಕು ಎಂದು ಮನದಟ್ಟು ಮಾಡಬೇಕು ಎಂದು ಹೇಳಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ಚಿತ್ರ ಕಲೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್, ಮಿಮ್ಸ್ ನಿರ್ದೇಶಕ ಹಾಗೂ ಡೀನ್ ಡಾ.ಪಿ ನರಸಿಂಹಮೂರ್ತಿ, ಮಿಮ್ಸ್ ವೈದ್ಯಕೀಯ ಅಧೀಕ್ಷಕರು ಡಾ ಶಿವಕುಮಾರ್, ವಿಜ್ಞಾನ ಸಂವಹನಕಾರರಾದ ಎಸ್ ಲೋಕೇಶ್, ಉಪ ಪರಿಸರ ಅಧಿಕಾರಿಗಳಾದ ಭವ್ಯ, ಅಶ್ವಿನಿಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…