ಮಂಡ್ಯ

ಜಗತ್ತಿನ ಸೌಂದರ್ಯ ಅಡಗಿರುವುದು ಪರಿಸರದಲ್ಲಿ: ಡಾ.ಕುಮಾರ

ಮಂಡ್ಯ:  ಪ್ರತಿಯೊಬ್ಬರೂ ಪ್ರಜ್ಞಾವಂತರಾಗಿ ಪರಿಸರವನ್ನು ಉಳಿಸಬೇಕು ಪ್ರತಿ ಮನೆಗಳಲ್ಲು ಕೂಡ ಚಿಕ್ಕ ಮಕ್ಕಳಿಗೆ ಪರಿಸರವನ್ನು ಉಳಿಸುವುದರ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.

ಅವರು ಇಂದು(ಜೂ.೬) ಮಂಡ್ಯ ಮಿಮ್ಸ್ ಇ ಎನ್ ಟಿ ವಿಭಾಗದ ಉಪನ್ಯಾಸ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಉದ್ಘಾಟನಾ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು.

ಜಗತ್ತು ಸೌಂದರ್ಯ ವಾಗಿರಬೇಕು ಎಂದರೆ ಮೊದಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಚನ್ನಾಗಿ ಇಟ್ಟುಕೊಳ್ಳಬೇಕು ಕಾರಣ ಜಗತ್ತಿನ ಸೌಂದರ್ಯ ಅಡಗಿರುವುದು ಪರಿಶುದ್ಧವಾದ ಪರಿಸರದಲ್ಲಿ, ನಾವು ಸುಂದರವಾಗಿ ಇದ್ದರೆ ಸಾಲದು ನಮಗೆ ಗಾಳಿ, ಬೆಳಕು ನೀಡುವ ಪರಿಸರವನ್ನು ನಾಶವಾಗದಂತೆ ನೋಡಿಕೊಳ್ಳಬೇಕು ಎಂದರು.

ನಮ್ಮ ಮುಂದಿನ ಭವಿಷ್ಯ ಚನ್ನಾಗಿ ಇರಬೇಕು ಅಂದರೆ ಮೊದಲು ನಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ನಮ್ಮ ಸಂಸ್ಕೃತಿಯನ್ನು ನಶಿಸಿ ಹೋಗದಂತೆ ಕಾಪಾಡಿ ಕೊಳ್ಳಬೇಕು. ಸಂಸ್ಕೃತಿ ಹಾಗೂ ಪರಿಸರ ಉಳಿದರೆ ಮುಂದಿನ ಪೀಳಿಗೆಯ ಜೀವನದ ಕೂಡ ಸುಖಕರವಾಗಿರುತ್ತದೆ ಎಂದು ಪ್ರತಿಪಾದಿಸಿದರು.

ಮನುಷ್ಯ ಎಷ್ಟು ಸ್ವಾರ್ಥಿ ಎಂದರೆ ಆತನ ದುರ್ಬುದ್ಧಿ ಯಿಂದಾಗಿ ಪರಿಸರ ನಾಶವಾಗುತ್ತಿದೆ ಇದೇ ಮುಂದುವರೆಯುತ್ತ ಹೋದರೆ ನಮ್ಮ ಮುಂದಿನ ಪೀಳಿಗೆಗೆ ಟಿವಿಗಳಲ್ಲಿ ತೋರಿಸಬೇಕಾಗುತ್ತದೆ ಇಂತಹ ಮರಗಳು ಇದ್ದವು ಇಂತಹ ಪ್ರಾಣಿಗಳು ಇದ್ದವು ಎಂದು ದಯವಿಟ್ಟು ಅಂತಹ ಒಂದು ಸಂದರ್ಭ ಸೃಷ್ಟಿ ಆಗದ ರೀತಿಯಲ್ಲಿ ನೋಡಿಕೊಂಡು ಪ್ರತಿಯೊಬ್ಬರು ಪರಿಸರವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಹುಟ್ಟು ಹಬ್ಬ ಆಚರಣೆಯ ದಿನದಂದು ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡುವುದರ ಜೊತೆಗೆ ಒಂದು ಗಿಡ ನೆಟ್ಟಿ ಸಂಭ್ರಮಾಚರಣೆ ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ , ಮಾನವ ತನ್ನ ಅಹಂ ನಿಂದ ಮರ ಗಿಡಗಳನ್ನು ನಾಶ ಮಾಡಿ ಮೂರ್ಖನಾಗದೇ ನಾನು ನಾನು ಎನ್ನುವ ಗರ್ವ ಬಿಟ್ಟು ಪರಿಸರ ರಕ್ಷಿಸುವಲ್ಲಿ ಮುಂದಾಗಬೇಕು ಎಂದು ಹೇಳಿದರು.

ಪ್ರಕೃತಿ ನಮ್ಮ ಬದುಕಿನ ಭಾಗವಲ್ಲ, ನಾವು ಪ್ರಕೃತಿಯ ಒಂದು ಭಾಗ ಆದ್ದರಿಂದ ಪ್ರಕೃತಿಯ ಒಂದಂಶವಾದ ನಾವುಗಳು ಪ್ರಕೃತಿಯ ಉಳಿವಿಗೆ ಕಾರಣವಾಗಬೇಕೆ ವಿನಃ ಪ್ರಕೃತಿಯ ಅಳಿವಿಗೆ ಕಾರಣವಾಗಬಾರದು ಎಂದರು

ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಿ ಪರಿಸರ ರಕ್ಷಣೆ ಮಾಡಬೇಕು ಎಂದು ಮನದಟ್ಟು ಮಾಡಬೇಕು ಎಂದು ಹೇಳಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ಚಿತ್ರ ಕಲೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್, ಮಿಮ್ಸ್ ನಿರ್ದೇಶಕ ಹಾಗೂ ಡೀನ್ ಡಾ.ಪಿ ನರಸಿಂಹಮೂರ್ತಿ, ಮಿಮ್ಸ್ ವೈದ್ಯಕೀಯ ಅಧೀಕ್ಷಕರು ಡಾ ಶಿವಕುಮಾರ್, ವಿಜ್ಞಾನ ಸಂವಹನಕಾರರಾದ ಎಸ್ ಲೋಕೇಶ್, ಉಪ ಪರಿಸರ ಅಧಿಕಾರಿಗಳಾದ ಭವ್ಯ, ಅಶ್ವಿನಿಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

9 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

13 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago