ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್ಎಸ್ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು ಬಿಟ್ಟಿರಲಿಲ್ಲ. ಹೀಗಾಗಿ ಬೇಸಿಗೆ ಬೆಳೆಯನ್ನು ರೈತರು ಬೆಳೆದಿರಲಿಲ್ಲ. ಆದರೆ, ಈ ಬಾರಿ ಜಲಾಶಯದಲ್ಲಿ ನೂರು ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ನಿನ್ನೆಯಿಂದ ನಾಲೆಗಳಿಗೆ ನೀರನ್ನು ಬಿಡಲಾಗಿದೆ. ಆದರೆ, ನೀರು ಬಿಟ್ಟ ಮಾರನೇ ದಿನವೇ ವಿಸಿ ನಾಲೆಗೆ ಬಿದ್ದು ಮಗುವೊಂದು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್ ಅಂಗನವಾಡಿಯಿಂದ ಬಂದು ಮನೆ ಬಳಿಯೇ ಆಟವಾಡುತ್ತಿದ್ದ. ಆದರೆ ಮಧ್ಯಾಹ್ನ 2.30ರಿಂದ ನಾಪತ್ತೆಯಾಗಿದ್ದಾನೆ. ಕೂಡಲೇ ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆ ಪಕ್ಕದಲ್ಲೇ ಇರುವ ವಿಶ್ವೇಶ್ವರಯ್ಯ ನಾಲೆ ಬಳಿ ಸಬಿನ್ ಚಪ್ಪಲಿ ಪತ್ತೆಯಾಗಿದೆ.
ಇನ್ನು ಆಟವಾಡುತ್ತಾ ಹೋಗಿ ಆಯತಪ್ಪಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮಸ್ಥರು, ಕುಟುಂಬ ಸದಸ್ಯರು ಸೇರಿಕೊಂಡು ಮಗು ಸಬಿನ್ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…