ಮಂಡ್ಯ

ವಿಸಿ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಬಾಲಕನ ಮೃತದೇಹ ಪತ್ತೆ

ಮಂಡ್ಯ : ವಿಸಿ ನಾಲೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ, 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಗಿದೆ.

ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲೆಯಲ್ಲಿ ಸಬಿನ್ ರಾಜ್ (4) ಕೊಚ್ಚಿ ಹೋಗಿದ್ದ. ಬಾಲಕನಿಗಾಗಿ ಅಗ್ನಿ ಶಾಮಕದಳ ಸಿಬ್ಬಂದಿ ನಿನ್ನೆ ಸಂಜೆಯಿಂದ ರಾತ್ರಿ ೯ರ ವರೆಗೆ  ಶೋಧ ಕಾರ್ಯ ನಡೆಸಿದ್ದರೂ ಕೂಡ ಬಾಲಕನ ಮೃತದೇಹ ಪತ್ತೆಯಾಗಲಿಲ್ಲ. ಹೀಗಾಗಿ ರಾತ್ರಿ ಶೋಧಕಾರ್ಯವನ್ನ ಸ್ಥಗಿತಗೊಳಿಸಲಾಗಿತ್ತು.

ಇಂದು ನಾಲೆಯಲ್ಲಿ ಸಂಪೂರ್ಣವಾಗಿ ನೀರು ನಿಲ್ಲಿಸಿದ್ರಿಂದ ಬೆಳಿಗ್ಗೆ ಮತ್ತೆ ಶೋಧ ನಡೆಸಿದ ಸಿಬ್ಬಂದಿಗೆ ನಾಲೆಗೆ ಬಿದ್ದಿದ್ದ ಸ್ವಲ್ಪ ದೂರದಲ್ಲೇ ಬಾಲಕನ ಶವ ಪತ್ತೆಯಾಗಿದೆ. ಇನ್ನು ಬಾಲಕನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.

ಈ ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

2 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

2 hours ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

2 hours ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

2 hours ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

2 hours ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

2 hours ago