ಮಂಡ್ಯ : ವಿಸಿ ನಾಲೆಯಲ್ಲಿ ಬಾಲಕ ಕೊಚ್ಚಿ ಹೋದ ಪ್ರಕರಣ, 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಗಿದೆ.
ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲೆಯಲ್ಲಿ ಸಬಿನ್ ರಾಜ್ (4) ಕೊಚ್ಚಿ ಹೋಗಿದ್ದ. ಬಾಲಕನಿಗಾಗಿ ಅಗ್ನಿ ಶಾಮಕದಳ ಸಿಬ್ಬಂದಿ ನಿನ್ನೆ ಸಂಜೆಯಿಂದ ರಾತ್ರಿ ೯ರ ವರೆಗೆ ಶೋಧ ಕಾರ್ಯ ನಡೆಸಿದ್ದರೂ ಕೂಡ ಬಾಲಕನ ಮೃತದೇಹ ಪತ್ತೆಯಾಗಲಿಲ್ಲ. ಹೀಗಾಗಿ ರಾತ್ರಿ ಶೋಧಕಾರ್ಯವನ್ನ ಸ್ಥಗಿತಗೊಳಿಸಲಾಗಿತ್ತು.
ಇಂದು ನಾಲೆಯಲ್ಲಿ ಸಂಪೂರ್ಣವಾಗಿ ನೀರು ನಿಲ್ಲಿಸಿದ್ರಿಂದ ಬೆಳಿಗ್ಗೆ ಮತ್ತೆ ಶೋಧ ನಡೆಸಿದ ಸಿಬ್ಬಂದಿಗೆ ನಾಲೆಗೆ ಬಿದ್ದಿದ್ದ ಸ್ವಲ್ಪ ದೂರದಲ್ಲೇ ಬಾಲಕನ ಶವ ಪತ್ತೆಯಾಗಿದೆ. ಇನ್ನು ಬಾಲಕನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.
ಈ ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…
ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…