ಮಂಡ್ಯ: ಕೋಳಿ ಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ಮೋಸ ಮಾಡಲು ಯತ್ನಿಸಿದವರನ್ನು ರೈತನೋರ್ವ ಮರಕ್ಕೆ ಕಟ್ಟಿ ಹಾಕಿದ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡಗೆ ಸೇರಿದ ಕೋಳಿಫಾರಂನಲ್ಲಿ ವಂಚನೆ ಪ್ರಕರಣ ನಡೆದಿದೆ.
ರೈತ ತಮ್ಮ ಕೋಳಿ ಫಾರಂನಲ್ಲಿ ಸಾಕು ಕೋಳಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ರು. ಕೋಳಿ ಖರೀದಿಸಲು ಬರುತ್ತಿದ್ದ ಮೈಸೂರು ಮೂಲದ NR ಚಿಕನ್ ಕಂಪನಿ ರೈತನಿಗೆ ಕಳೆದ ಮೂರ್ನಾಲ್ಕು ತಿಂಗಳಿಂದ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡ್ತಿದ್ದರು.
ವಂಚನೆ ಬಗ್ಗೆ ಅನುಮಾನಗೊಂಡ ರೈತ ಹನುಮಂತೇಗೌಡ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಒಂದು ತೂಕದಲ್ಲಿ ರೈತನಿಗೆ ಸರಿಸುಮಾರು 30ಕೆಜಿ ವ್ಯತ್ಯಾಸ ಕಂಡುಬಂದಿದೆ.
ಇದರಿಂದ ರೊಚ್ಚಿಗೆದ್ದ ರೈತ ಕೋಳಿ ತುಂಬಲು ಬಂದಿದ್ದ ನಾಲ್ವರಲ್ಲಿ ಇಬ್ಬರನ್ನು ಹಿಡಿದು ಮರಕ್ಕೆ ಕಟ್ಟಿಹಾಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಪಾಂಡವಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…