ಮಂಡ್ಯ

ಇಂದಿನಿಂದ ಶ್ರೀರಂಗಪಟ್ಟಣ ದಸರಾ: ಮೊದಲ ಮೈಸೂರು ದಸರಾ ಶುರುವಾಗಿದ್ದು ಇಲ್ಲೇ!!

ಮೈಸೂರು: ಬರೊಬ್ಬರಿ 414 ವರ್ಷಗಳ ಇತಿಹಾಸವಿರುವ ನಾಡಹಬ್ಬ ಮೈಸೂರು ದಸರಾ ವಿಶ್ವದ ಗಮನ ಸೆಳೆದಿದ್ದು, ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಮಂದಿ ಮೈಸೂರಿನತ್ತ ಮುಖ ಮಾಡುತ್ತಾರೆ. ಆದರೆ, ಈ ದಸರಾ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ ಐತಿಹಾಸಿಕ ಪಟ್ಟಣ ಶ್ರೀರಂಗಪಟ್ಟಣದಲ್ಲಿ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಈ ಕುರಿತ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ…..

ಮೈಸೂರಿನಲ್ಲಿ ದಸರಾ ಆಚರಣೆಗೂ ಮುನ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮೊಟ್ಟ ಮೊದಲನೆಯದಾಗಿ ದಸರಾ ಆಚರಣೆ ಪ್ರಾರಂಭವಾಯಿತು. ಈ ಹಿಂದೆ ವಿಜಯನಗರ ಅರಸರ ಸಾಮಂತ ರಾಜರಾಗಿದ್ದ ಶ್ರೀರಂಗರಾಯ ಶ್ರೀರಂಗಪಟ್ಟಣದಲ್ಲಿ ಆಡಳಿತ ನಡೆಸುತ್ತಿದ್ದರು. ಈತನ ಕಾಲದಲ್ಲಿಯೇ ನವರಾತ್ರಿ ಆಚರಣೆ ಇಲ್ಲಿ ನಡೆಯುತ್ತಿತ್ತು ಎಂದು ಇತಿಹಾಸ ಹೇಳುತ್ತದೆ. ಆದರೆ, 1610 ರಲ್ಲಿ ಶ್ರೀರಂಗಪಟ್ಟಣಕ್ಕೆ ದಂಡೆತ್ತಿ ಬಂದ ಮೈಸೂರು ರಾಜರಾದ ಯದುವಂಶದ ರಾಜ ಒಡೆಯರ್‌ ಶ್ರೀರಂಗಪಟ್ಟಣವನ್ನು ವಶಕ್ಕೆ ಪಡೆದುಕೊಂಡರು. ಇಲ್ಲಿಯವರೆಗೆ ಹದಿನಾಡನ್ನು ರಾಜಧಾನಿಯಾಗಿ ಮಾಡಿಕೊಂಡಿದ್ದ ಮೈಸೂರು ರಾಜರು ಶ್ರೀರಂಗಪಟ್ಟಣ ತಮ್ಮ ತೆಕ್ಕೆಗೆ ಬಂದ ಬಳಿಕ ಶ್ರೀರಂಗಪಟ್ಟಣವನ್ನೇ ರಾಜಾಧಾನಿಯನ್ನಾಗಿಸಿಕೊಂಡು ರಾಜ್ಯಭಾರ ಮಾಡುವ ವೇಳೆ, ವಿಜಯನಗರ ಅರಸರಂತೆ ತಮ್ಮ ಅರಮನೆಯಲ್ಲಿಯೂ ದಸರಾ ಆಚರಣೆ ಆರಂಭಿಸಿದರು ಎಂಬುದು ಇತಿಹಾಸವಾಗಿದೆ.

ವಿಜಯನಗರ ಸಾಮ್ರಾಜ್ಯದ ವಿಜಯದಶಮಿ ಆಚರಣೆಯನ್ನು ರಾಜ ಒಡೆಯರ್‌ ಶ್ರೀರಂಗಪಟ್ಟಣದಲ್ಲಿ ಆಚರಿಸುವ ಮೂಲಕ ದಸರಾ ಆಚರಣೆಗೆ ಮುನ್ನುಡಿ ಬರೆದರು. ಆ ನಂತರ ಮುಮ್ಮಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ(1799-1868) ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದರು. ಇಲ್ಲಿಯೂ ದಸರಾ ಆಚರಣೆಯನ್ನು ಮುಂದುವರೆಸಿದರು. ಬಳಿಕ, ಮೈಸೂರು ದಸರಾವಾಗಿ ಖ್ಯಾತಿ ಪಡೆದಿತ್ತು ಇತಿಹಾಸ.

ಅತ್ತ ಶ್ರೀರಂಗಪಟ್ಟಣ ದಸರಾ ಮಂಕಾಯಿತು. ಇತ್ತೀಚೆಗೆ ಮಂಡ್ಯ ಜನರ ಬಯಕೆಯಂತೆ 2008ರಿಂದ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆಗೆ ಜಿಲ್ಲಾಡಳಿತ ಮುಂದಾಯಿತು. ಅಲ್ಲಿಂದ ಪ್ರತಿ ವರ್ಷ ಶ್ರೀರಂಗಪಟ್ಟಣದ ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪರ್ಚನೆ ಮಾಡಿ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತದೆ. ಬಳಿಕ, ವೈದಿಕರ ತಂಡ ಪ್ರಥಮವಾಗಿ ನಂದಿ ದ್ವಜಕ್ಕೆ ಪೂಜೆ ಸಲ್ಲಿಸಿ, ಪೂಜಾಕೈಂಕರ್ಯ ಮಾಡುವ ಮೂಲಕ ದಸರಾವು ವಿದ್ಯುಕ್ತವಾಗಿ ಆರಂಭವಾಗುತ್ತದೆ.

ಇಂದಿನಿಂದ ಶ್ರೀರಂಗಪಟ್ಟಣ ದಸರಾ ಆರಂಭ

ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಇಂದಿನಿಂದ ಆರಂಭವಾಗಿದೆ. ಖ್ಯಾತ ನಟ ಡಾ. ಶಿವರಾಜ್‌ಕುಮಾರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಿಂದ ಜಂಬೂಸವಾರಿ ಆರಂಭವಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನಂದಿ ಪೂಜೆ ಮಾಡಿ, ಚಾಮುಂಡಿಗೆ ಪುಷ್ಪರ್ಚನೆ ಮಾಡಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

45 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

55 mins ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

14 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

15 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

15 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

15 hours ago