ಮಂಡ್ಯ

ಮತ್ತೆ ನರ್ತಿಸುತ್ತಿದೆ ಬೃಂದಾವನದ ಕಾರಂಜಿ

ಮಂಡ್ಯ : ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನದಲ್ಲಿರುವ ನವೀಕೃತ ಸಂಗೀತ ಕಾರಂಜಿ ಕೊನೆಗೂ ಉದ್ಘಾಟನೆ ಭಾಗ್ಯ ಕಂಡಿದೆ.

ಅಂದಾಜು ೨.೬೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣಗೊಂಡಿರುವ ನೂತನ ಸಂಗೀತ ಕಾರಂಜಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ಚಾಲನೆ ನೀಡಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿದ್ದ ಕೆಆರ್‌ಎಸ್‌ನ ಸಂಗೀತ ಕಾರಂಜಿ ತನ್ನ ನರ್ತನವನ್ನು ನಿಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತ ಸಂಗೀತ ಕಾರಂಜಿಯನ್ನು ಹೊಸದಾಗಿಯೇ ನಿರ್ಮಿಸಿದೆ. ಮುಂಬೈ ಮೂಲದ ಗ್ರೀನ್ ಕೇರ್ ಕಂಪನಿಯು ಈ ವರ್ಷದ ಮಾರ್ಚ್‌ನಲ್ಲಿ ನೂತನ ಸಂಗೀತ ಕಾರಂಜಿ ನಿರ್ಮಾಣದ ಪಡೆದು ವಾರಗಳ ಹಿಂದೆಯೇ ನವೀಕರಣ ಕಾಮಗಾರಿ ಮುಗಿಸಿತ್ತು. ಆದರೆ ಉದ್ಘಾಟನೆ ಕಾರ‍್ಯಕ್ರಮ ಹಮ್ಮಿಕೊಳ್ಳಬೇಕೆಂಬ ದೃಷ್ಟಿಯಿಂದ ಹೊಸ ಸಂಗೀತ ಕಾರಂಜಿಯನ್ನು ಪ್ರವಾಸಿಗರಿಗೆ ತೆರೆದಿರಲಿಲ್ಲ.

ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಕಾರಂಜಿಯ ಉದ್ಘಾಟನೆ ನೆರವೇರಿಸಿದ್ದಾರೆ. ಈ ಮೂಲಕ ದಸರಾ ಸಂದರ್ಭದಲ್ಲಿ ಮೈಸೂರಿಗೆ ಬರುವ ಪ್ರವಾಸಿಗರ ಮನಸ್ಸಿಗೆ ಮುದ ನೀಡಲು ಅನುವು ಮಾಡಿಕೊಟ್ಟಿದ್ದಾರೆ. ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉದ್ಯಾನದ ವಿವಿಧ ಕಾರಂಜಿಗಳಲ್ಲಿ ಸಂಗೀತ ಕಾರಂಜಿ ಪ್ರಮುಖ ಆಕರ್ಷಣೆಯಾಗಿದೆ.

ಯುವರತ್ನ ಚಿತ್ರದ ‘ಫೀಲ್ ದಿ ಪವರ್’ 
ದೇಶದ ಮೊದಲ ಹೈಟೆಕ್ ಸಂಗೀತ ಕಾರಂಜಿ ಇದಾಗಿದ್ದು ಅತ್ಯಾಧುನಿಕ ಟು-ಡೈಮನ್‌ಷನ್ (೨ಡಿ) ನಾಜಿಲ್ ಅನ್ನು ಅಳವಡಿಸಲಾಗಿದೆ. ನೂತನ ಕಾರಂಜಿಯಲ್ಲಿ ಹೊಸ ವಿನ್ಯಾಸ, ಆಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಾಗಿದೆ. ಜತೆಗೆ ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಹಾಡುಗಳನ್ನು ಅಳವಡಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅವರ ‘ಯುವರತ್ನ’ ಚಿತ್ರದ ‘ಫೀಲ್ ದಿ ಪವರ್’, ವಿಷ್ಣುವರ್ಧನ್ ಅವರ ‘ಜೀವನದಿ’ ಚಿತ್ರದ ‘ಕನ್ನಡ ನಾಡಿನ ಜೀವನದಿ ಕಾವೇರಿ’ಹಾಗೂ ದೇಶ ಭಕ್ತಿಗೀತೆ ‘ಸಾರೆ ಜಹಾಸೆ ಅಚ್ಚ..’ ಮುಂತಾದ ಹಾಡುಗಳು ಜನಮನ ಗೆಲ್ಲಲಿದೆ.

ಪ್ರತೀ ದಿನ ಸಂಜೆ ೭ ರಿಂದ ೮ಗಂಟೆವರೆಗೆ ಕಾರಂಜಿ ಕಾರ್ಯಕ್ರಮ ನಡೆಯಲಿದ್ದು, ವಾರಾಂತ್ಯದಲ್ಲಿ ೯ ಗಂಟೆ ವರೆಗೆ ನಡೆಯಲಿದೆ ಎಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಎಇಇ -ರುಕ್ ಅಹಮದ್ ಅಬು ತಿಳಿಸಿದ್ದಾರೆ.

andolanait

Recent Posts

ಅಪಘಾತದಲ್ಲಿ ಗಾಯಗೊಂಡವನಿಂದ 80 ಸಾವಿರ ದೋಚಿದ್ದ ಇಬ್ಬರು ಅರೆಸ್ಟ್‌

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ…

15 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…

42 mins ago

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

1 hour ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

2 hours ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

2 hours ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

2 hours ago