ಮಂಡ್ಯ : ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನದಲ್ಲಿರುವ ನವೀಕೃತ ಸಂಗೀತ ಕಾರಂಜಿ ಕೊನೆಗೂ ಉದ್ಘಾಟನೆ ಭಾಗ್ಯ ಕಂಡಿದೆ.
ಅಂದಾಜು ೨.೬೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣಗೊಂಡಿರುವ ನೂತನ ಸಂಗೀತ ಕಾರಂಜಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ಚಾಲನೆ ನೀಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿದ್ದ ಕೆಆರ್ಎಸ್ನ ಸಂಗೀತ ಕಾರಂಜಿ ತನ್ನ ನರ್ತನವನ್ನು ನಿಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತ ಸಂಗೀತ ಕಾರಂಜಿಯನ್ನು ಹೊಸದಾಗಿಯೇ ನಿರ್ಮಿಸಿದೆ. ಮುಂಬೈ ಮೂಲದ ಗ್ರೀನ್ ಕೇರ್ ಕಂಪನಿಯು ಈ ವರ್ಷದ ಮಾರ್ಚ್ನಲ್ಲಿ ನೂತನ ಸಂಗೀತ ಕಾರಂಜಿ ನಿರ್ಮಾಣದ ಪಡೆದು ವಾರಗಳ ಹಿಂದೆಯೇ ನವೀಕರಣ ಕಾಮಗಾರಿ ಮುಗಿಸಿತ್ತು. ಆದರೆ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂಬ ದೃಷ್ಟಿಯಿಂದ ಹೊಸ ಸಂಗೀತ ಕಾರಂಜಿಯನ್ನು ಪ್ರವಾಸಿಗರಿಗೆ ತೆರೆದಿರಲಿಲ್ಲ.
ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಕಾರಂಜಿಯ ಉದ್ಘಾಟನೆ ನೆರವೇರಿಸಿದ್ದಾರೆ. ಈ ಮೂಲಕ ದಸರಾ ಸಂದರ್ಭದಲ್ಲಿ ಮೈಸೂರಿಗೆ ಬರುವ ಪ್ರವಾಸಿಗರ ಮನಸ್ಸಿಗೆ ಮುದ ನೀಡಲು ಅನುವು ಮಾಡಿಕೊಟ್ಟಿದ್ದಾರೆ. ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉದ್ಯಾನದ ವಿವಿಧ ಕಾರಂಜಿಗಳಲ್ಲಿ ಸಂಗೀತ ಕಾರಂಜಿ ಪ್ರಮುಖ ಆಕರ್ಷಣೆಯಾಗಿದೆ.
ಯುವರತ್ನ ಚಿತ್ರದ ‘ಫೀಲ್ ದಿ ಪವರ್’
ದೇಶದ ಮೊದಲ ಹೈಟೆಕ್ ಸಂಗೀತ ಕಾರಂಜಿ ಇದಾಗಿದ್ದು ಅತ್ಯಾಧುನಿಕ ಟು-ಡೈಮನ್ಷನ್ (೨ಡಿ) ನಾಜಿಲ್ ಅನ್ನು ಅಳವಡಿಸಲಾಗಿದೆ. ನೂತನ ಕಾರಂಜಿಯಲ್ಲಿ ಹೊಸ ವಿನ್ಯಾಸ, ಆಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಾಗಿದೆ. ಜತೆಗೆ ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಹಾಡುಗಳನ್ನು ಅಳವಡಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅವರ ‘ಯುವರತ್ನ’ ಚಿತ್ರದ ‘ಫೀಲ್ ದಿ ಪವರ್’, ವಿಷ್ಣುವರ್ಧನ್ ಅವರ ‘ಜೀವನದಿ’ ಚಿತ್ರದ ‘ಕನ್ನಡ ನಾಡಿನ ಜೀವನದಿ ಕಾವೇರಿ’ಹಾಗೂ ದೇಶ ಭಕ್ತಿಗೀತೆ ‘ಸಾರೆ ಜಹಾಸೆ ಅಚ್ಚ..’ ಮುಂತಾದ ಹಾಡುಗಳು ಜನಮನ ಗೆಲ್ಲಲಿದೆ.
ಪ್ರತೀ ದಿನ ಸಂಜೆ ೭ ರಿಂದ ೮ಗಂಟೆವರೆಗೆ ಕಾರಂಜಿ ಕಾರ್ಯಕ್ರಮ ನಡೆಯಲಿದ್ದು, ವಾರಾಂತ್ಯದಲ್ಲಿ ೯ ಗಂಟೆ ವರೆಗೆ ನಡೆಯಲಿದೆ ಎಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಎಇಇ -ರುಕ್ ಅಹಮದ್ ಅಬು ತಿಳಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…