ಮಂಡ್ಯ

ಮತ್ತೆ ನರ್ತಿಸುತ್ತಿದೆ ಬೃಂದಾವನದ ಕಾರಂಜಿ

ಮಂಡ್ಯ : ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನದಲ್ಲಿರುವ ನವೀಕೃತ ಸಂಗೀತ ಕಾರಂಜಿ ಕೊನೆಗೂ ಉದ್ಘಾಟನೆ ಭಾಗ್ಯ ಕಂಡಿದೆ.

ಅಂದಾಜು ೨.೬೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣಗೊಂಡಿರುವ ನೂತನ ಸಂಗೀತ ಕಾರಂಜಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ಚಾಲನೆ ನೀಡಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿದ್ದ ಕೆಆರ್‌ಎಸ್‌ನ ಸಂಗೀತ ಕಾರಂಜಿ ತನ್ನ ನರ್ತನವನ್ನು ನಿಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತ ಸಂಗೀತ ಕಾರಂಜಿಯನ್ನು ಹೊಸದಾಗಿಯೇ ನಿರ್ಮಿಸಿದೆ. ಮುಂಬೈ ಮೂಲದ ಗ್ರೀನ್ ಕೇರ್ ಕಂಪನಿಯು ಈ ವರ್ಷದ ಮಾರ್ಚ್‌ನಲ್ಲಿ ನೂತನ ಸಂಗೀತ ಕಾರಂಜಿ ನಿರ್ಮಾಣದ ಪಡೆದು ವಾರಗಳ ಹಿಂದೆಯೇ ನವೀಕರಣ ಕಾಮಗಾರಿ ಮುಗಿಸಿತ್ತು. ಆದರೆ ಉದ್ಘಾಟನೆ ಕಾರ‍್ಯಕ್ರಮ ಹಮ್ಮಿಕೊಳ್ಳಬೇಕೆಂಬ ದೃಷ್ಟಿಯಿಂದ ಹೊಸ ಸಂಗೀತ ಕಾರಂಜಿಯನ್ನು ಪ್ರವಾಸಿಗರಿಗೆ ತೆರೆದಿರಲಿಲ್ಲ.

ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಕಾರಂಜಿಯ ಉದ್ಘಾಟನೆ ನೆರವೇರಿಸಿದ್ದಾರೆ. ಈ ಮೂಲಕ ದಸರಾ ಸಂದರ್ಭದಲ್ಲಿ ಮೈಸೂರಿಗೆ ಬರುವ ಪ್ರವಾಸಿಗರ ಮನಸ್ಸಿಗೆ ಮುದ ನೀಡಲು ಅನುವು ಮಾಡಿಕೊಟ್ಟಿದ್ದಾರೆ. ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉದ್ಯಾನದ ವಿವಿಧ ಕಾರಂಜಿಗಳಲ್ಲಿ ಸಂಗೀತ ಕಾರಂಜಿ ಪ್ರಮುಖ ಆಕರ್ಷಣೆಯಾಗಿದೆ.

ಯುವರತ್ನ ಚಿತ್ರದ ‘ಫೀಲ್ ದಿ ಪವರ್’ 
ದೇಶದ ಮೊದಲ ಹೈಟೆಕ್ ಸಂಗೀತ ಕಾರಂಜಿ ಇದಾಗಿದ್ದು ಅತ್ಯಾಧುನಿಕ ಟು-ಡೈಮನ್‌ಷನ್ (೨ಡಿ) ನಾಜಿಲ್ ಅನ್ನು ಅಳವಡಿಸಲಾಗಿದೆ. ನೂತನ ಕಾರಂಜಿಯಲ್ಲಿ ಹೊಸ ವಿನ್ಯಾಸ, ಆಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಾಗಿದೆ. ಜತೆಗೆ ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಹಾಡುಗಳನ್ನು ಅಳವಡಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅವರ ‘ಯುವರತ್ನ’ ಚಿತ್ರದ ‘ಫೀಲ್ ದಿ ಪವರ್’, ವಿಷ್ಣುವರ್ಧನ್ ಅವರ ‘ಜೀವನದಿ’ ಚಿತ್ರದ ‘ಕನ್ನಡ ನಾಡಿನ ಜೀವನದಿ ಕಾವೇರಿ’ಹಾಗೂ ದೇಶ ಭಕ್ತಿಗೀತೆ ‘ಸಾರೆ ಜಹಾಸೆ ಅಚ್ಚ..’ ಮುಂತಾದ ಹಾಡುಗಳು ಜನಮನ ಗೆಲ್ಲಲಿದೆ.

ಪ್ರತೀ ದಿನ ಸಂಜೆ ೭ ರಿಂದ ೮ಗಂಟೆವರೆಗೆ ಕಾರಂಜಿ ಕಾರ್ಯಕ್ರಮ ನಡೆಯಲಿದ್ದು, ವಾರಾಂತ್ಯದಲ್ಲಿ ೯ ಗಂಟೆ ವರೆಗೆ ನಡೆಯಲಿದೆ ಎಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಎಇಇ -ರುಕ್ ಅಹಮದ್ ಅಬು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

2 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

2 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

2 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

2 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

5 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

5 hours ago