ಮಂಡ್ಯ

ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ: ಡಾ.ಕೆ ಮೋಹನ್

ಮಂಡ್ಯ: ರಕ್ತದಾನ ಎಂಬುವುದು ಎಲ್ಲ ದಾನಕ್ಕಿಂತಲೂ ಮಿಗಿಲಾದದ್ದು, ರಕ್ತದಾನ ಮಾಡಿದರೆ ಬೇರೊಬ್ಬರಿಗೆ ಜೀವದಾನ ಮಾಡಿದಂತೆ. ಆದ್ದರಿಂದ ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್  ಅಭಿಪ್ರಾಯಪಟ್ಟರು.

ಅವರು ಇಂದು ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ರಕ್ತದಾನ ಎಂಬುವುದು ದಾನಗಳಲ್ಲೇ ಶ್ರೇಷ್ಠವಾದ ದಾನ, ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಮನುಷ್ಯನು ಆರೋಗ್ಯ ವೃದ್ಧಿಯಾಗುತ್ತದೆ. ರಕ್ತದಾನದಿಂದ ಆರೋಗ್ಯಕ್ಕೆ ತೊಂದರೆಯಾಗುತ್ತದೆ ಎಂಬ ಮನೋಭಾವವನ್ನು ದೂರಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವರ್ಷದ ಘೋಷವಾಕ್ಯವಾದ 20 ವರ್ಷಗಳ ರಕ್ತದಾನ ಸಂಭ್ರಮ, ಧನ್ಯವಾದ ರಕ್ತದಾನಿಗಳಿಗೆ ಎಂಬ ವಾಕ್ಯವನ್ನು ಇಟ್ಟುಕೊಂಡು ಇಂದು ನಾವು ಜನಗಳಿಗೆ ಅರಿವು ಮೂಡಿಸುವುದಕ್ಕೆ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಆರೋಗ್ಯವಂತ ಯುವಜನತೆಯು ರಕ್ತದಾನ ಮಾಡುವುದರಿಂದ ಅಪಘಾತ,ಶಸ್ತ್ರಚಿಕಿತ್ಸೆ ಯ ಸಂದರ್ಭದಲ್ಲಿ, ಡೆಂಗ್ಯೂ,ರಕ್ತದ ಕೊರತೆ ಇರುವವರಿಗೆ ಬಹಳ ಪ್ರಯೋಜನವಾಗುತ್ತದೆ ಯುವಜನತೆಯು ರಕ್ತದಾನ ಮಾಡುವುದಕ್ಕೆ ಮುಂದೆ ಬನ್ನಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ (ಟಿ.ಎಚ್.ಒ) ಡಾ.ಜವರೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಗಾಯಿತ್ರಿ, ಜಿಲ್ಲಾ ಆರೋಗ್ಯ ಇಲಾಖೆಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಮಮತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago