Father-in-law murdered by son-in-law: Wife and aunt-in-law arrested for aiding the murder.
ಮಂಡ್ಯ: ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡವೊಂದು ಕಳ್ಳತನ ಮಾಡಿದ ದೃಶ್ಯವನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ.
ಕಳೆದ ತಡರಾತ್ರಿ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಬಂದ ದರೋಡೆಕೋರರ ತಂಡ ಅಂಗಡಿ ಬಾಗಿಲನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ ಒಳನುಗ್ಗಿ ಚಿನ್ನಾಭರಣ ದೋಚುತ್ತಿದ್ದರು.
ಈ ವೇಳೆ ಪಕ್ಕದಲ್ಲಿದ್ದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ ಅವರು ಶಬ್ದ ಕೇಳಿ ಹೊರಬಂದಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿ.ಕೃಷ್ಣಪ್ಪ ಸೇರಿದಂತೆ ಹಲವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…