ಮಂಡ್ಯ

ಮಂಡ್ಯ: ಕಳ್ಳತನ ದೃಶ್ಯ ನೋಡಿದ ವ್ಯಕ್ತಿಯ ಕೊಲೆ

ಮಂಡ್ಯ: ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡವೊಂದು ಕಳ್ಳತನ ಮಾಡಿದ ದೃಶ್ಯವನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.

ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್‌ ಮಾಲೀಕ ಮಾದಪ್ಪ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ.

ಕಳೆದ ತಡರಾತ್ರಿ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಬಂದ ದರೋಡೆಕೋರರ ತಂಡ ಅಂಗಡಿ ಬಾಗಿಲನ್ನು ಗ್ಯಾಸ್‌ ಕಟರ್‌ನಿಂದ ಕಟ್‌ ಮಾಡಿ ಒಳನುಗ್ಗಿ ಚಿನ್ನಾಭರಣ ದೋಚುತ್ತಿದ್ದರು.

ಈ ವೇಳೆ ಪಕ್ಕದಲ್ಲಿದ್ದ ಮಹದೇಶ್ವರ ಹೋಟೆಲ್‌ ಮಾಲೀಕ ಮಾದಪ್ಪ ಅವರು ಶಬ್ದ ಕೇಳಿ ಹೊರಬಂದಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿ.ಕೃಷ್ಣಪ್ಪ ಸೇರಿದಂತೆ ಹಲವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

24 mins ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

50 mins ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

2 hours ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

2 hours ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

3 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

6 hours ago