Father-in-law murdered by son-in-law: Wife and aunt-in-law arrested for aiding the murder.
ಮಂಡ್ಯ: ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡವೊಂದು ಕಳ್ಳತನ ಮಾಡಿದ ದೃಶ್ಯವನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ.
ಕಳೆದ ತಡರಾತ್ರಿ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಬಂದ ದರೋಡೆಕೋರರ ತಂಡ ಅಂಗಡಿ ಬಾಗಿಲನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ ಒಳನುಗ್ಗಿ ಚಿನ್ನಾಭರಣ ದೋಚುತ್ತಿದ್ದರು.
ಈ ವೇಳೆ ಪಕ್ಕದಲ್ಲಿದ್ದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ ಅವರು ಶಬ್ದ ಕೇಳಿ ಹೊರಬಂದಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿ.ಕೃಷ್ಣಪ್ಪ ಸೇರಿದಂತೆ ಹಲವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…