ಮಂಡ್ಯ

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಜ.27ರಿಂದ ಆರಂಭವಾದ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರ ರಾತ್ರಿ ಮತ್ತು ಶನಿವಾರ ಸಿಡಿ ಉತ್ಸವ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆದು, ಪಟ್ಟಲದಮ್ಮ ದೇವಸ್ಥಾನದ ಆವರಣಕ್ಕೆ ಆಗಮಿಸಿ, ಅಪಾರ ಭಕ್ತ ಸಮೂಹದ ಸಮ್ಮುಖದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಿದ ನಂತರ ಅಗ್ನಿ ಕೊಂಡವನ್ನು ಅರ್ಚಕರು ಮತ್ತು ಹರಕೆ ಹೊತ್ತ ಭಕ್ತರು ಕೊಂಡ ಹಾಯುವ ಮೂಲಕ ಐತಿಹಾಸಿಕ ಸಿಡಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

ಸಿಡಿ ರಣಕ್ಕೆ ವಿಶೇಷ ಪೂಜೆ
ಸಿಡಿ ಜಾತ್ರಾ ಮಹೋತ್ಸವ ಶುಕ್ರವಾರ ರಾತ್ರಿಯಿಡೀ ಸಂಪ್ರದಾಯಬದ್ಧ ಆಚರಣೆಯಂತೆ ನಡೆಯಿತು. ಪ್ರತಿಯೊಂದು ಸಮಾಜದವರು ಘಟ್ಟಗಳನ್ನು ತಂದು ಶಕ್ತಿ ದೇವತೆಗೆ ಪೂಜೆ ಸಲ್ಲಿಸಿದರು. ಅನಂತರಾಂ ವೃತ್ತದ ಬಳಿ ಎಲ್ಲ ಘಟ್ಟಗಳು ಆಗಮಿಸಿದವು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿಶೇಷ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡುವುದರೊಂದಿಗೆ ರಾತ್ರಿಯಿಡೀ ಜನರೊಡಗೂಡಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು.

ಶಾಸಕರ ಜೊತೆಯಲ್ಲಿ ಐಜಿಪಿ ನಂಜುಂಡಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ.ಶೋಭಾರಾಣಿ, ತಹಸಿಲ್ದಾರ್, ಉಪವಿಭಾಗಾಧಿಕಾರಿ ಘಟ್ಟಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಬೀದಿಯಲ್ಲಿ ಶುಕ್ರವಾರ ಮಧ್ಯರಾತ್ರಿ 1.45ರ ಸಮಯದಲ್ಲಿ ಸಿಡಿ ರಣವು ಅಲಂಕೃತಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಸುಲ್ತಾನ್ ರಸ್ತೆಯ ಮೂಲಕ ಶನಿವಾರ ಬೆಳಿಗ್ಗೆ 9 ಗಂಟೆಗೆ ದೇವಸ್ಥಾನದ ಬಳಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಸಹಸ್ರಾರು ಭಕ್ತರು ಸಿಡಿ ರಣದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಸಿಡಿಗೆ ಹಣ್ಣು ದವನ ಎಸೆದು ಕೊಂಡಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ನೂರಾರು ವರ್ಷಗಳಿಂದ ಪಟ್ಟಣದ ಶಕ್ತಿ ದೇವತೆ ಪಟ್ಟಲದಮ್ಮ ಸಿಡಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಬಾರಿಯೂ ಭಕ್ತರ ನಂಬಿಕೆಗೆ ಚ್ಯುತಿಬಾರದ ರೀತಿಯಲ್ಲಿ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಿದ್ದೇವೆ. ಸಕಾಲಕ್ಕೆ ಮಳೆ ಬೆಳೆಯಾಗಿ ನಾಡಿನ ಜನರು ನೆಮ್ಮದಿಯಿಂದ ಬದುಕಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

1 hour ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

2 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

2 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

2 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

2 hours ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

2 hours ago