ಮಂಡ್ಯ

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಜ.27ರಿಂದ ಆರಂಭವಾದ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರ ರಾತ್ರಿ ಮತ್ತು ಶನಿವಾರ ಸಿಡಿ ಉತ್ಸವ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆದು, ಪಟ್ಟಲದಮ್ಮ ದೇವಸ್ಥಾನದ ಆವರಣಕ್ಕೆ ಆಗಮಿಸಿ, ಅಪಾರ ಭಕ್ತ ಸಮೂಹದ ಸಮ್ಮುಖದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಿದ ನಂತರ ಅಗ್ನಿ ಕೊಂಡವನ್ನು ಅರ್ಚಕರು ಮತ್ತು ಹರಕೆ ಹೊತ್ತ ಭಕ್ತರು ಕೊಂಡ ಹಾಯುವ ಮೂಲಕ ಐತಿಹಾಸಿಕ ಸಿಡಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

ಸಿಡಿ ರಣಕ್ಕೆ ವಿಶೇಷ ಪೂಜೆ
ಸಿಡಿ ಜಾತ್ರಾ ಮಹೋತ್ಸವ ಶುಕ್ರವಾರ ರಾತ್ರಿಯಿಡೀ ಸಂಪ್ರದಾಯಬದ್ಧ ಆಚರಣೆಯಂತೆ ನಡೆಯಿತು. ಪ್ರತಿಯೊಂದು ಸಮಾಜದವರು ಘಟ್ಟಗಳನ್ನು ತಂದು ಶಕ್ತಿ ದೇವತೆಗೆ ಪೂಜೆ ಸಲ್ಲಿಸಿದರು. ಅನಂತರಾಂ ವೃತ್ತದ ಬಳಿ ಎಲ್ಲ ಘಟ್ಟಗಳು ಆಗಮಿಸಿದವು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿಶೇಷ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡುವುದರೊಂದಿಗೆ ರಾತ್ರಿಯಿಡೀ ಜನರೊಡಗೂಡಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು.

ಶಾಸಕರ ಜೊತೆಯಲ್ಲಿ ಐಜಿಪಿ ನಂಜುಂಡಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ.ಶೋಭಾರಾಣಿ, ತಹಸಿಲ್ದಾರ್, ಉಪವಿಭಾಗಾಧಿಕಾರಿ ಘಟ್ಟಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಬೀದಿಯಲ್ಲಿ ಶುಕ್ರವಾರ ಮಧ್ಯರಾತ್ರಿ 1.45ರ ಸಮಯದಲ್ಲಿ ಸಿಡಿ ರಣವು ಅಲಂಕೃತಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಸುಲ್ತಾನ್ ರಸ್ತೆಯ ಮೂಲಕ ಶನಿವಾರ ಬೆಳಿಗ್ಗೆ 9 ಗಂಟೆಗೆ ದೇವಸ್ಥಾನದ ಬಳಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಸಹಸ್ರಾರು ಭಕ್ತರು ಸಿಡಿ ರಣದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಸಿಡಿಗೆ ಹಣ್ಣು ದವನ ಎಸೆದು ಕೊಂಡಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ನೂರಾರು ವರ್ಷಗಳಿಂದ ಪಟ್ಟಣದ ಶಕ್ತಿ ದೇವತೆ ಪಟ್ಟಲದಮ್ಮ ಸಿಡಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಬಾರಿಯೂ ಭಕ್ತರ ನಂಬಿಕೆಗೆ ಚ್ಯುತಿಬಾರದ ರೀತಿಯಲ್ಲಿ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಿದ್ದೇವೆ. ಸಕಾಲಕ್ಕೆ ಮಳೆ ಬೆಳೆಯಾಗಿ ನಾಡಿನ ಜನರು ನೆಮ್ಮದಿಯಿಂದ ಬದುಕಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

1 hour ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

1 hour ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

3 hours ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

6 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

6 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

7 hours ago