ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ವಿ.ನಂದೀಶ್ ಹೇಳಿದರು.
ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಡ್ಯ ಇವರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆದ ಕಾಯಕ ಶರಣರ ಜಯಂತಿ (ಮಾದರ ಚೆನ್ನಯ್ಯ ಮಾದರ ಧೂಳಯ್ಯ ಡೋಹರ ಕಕ್ಕಯ್ಯ ಸಮಗಾರ ಹರಳಯ್ಯ ಉರಿಲಿಂಗ ಪೆದ್ದಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆಗಳನ್ನು ಮಾಡಿದ್ದಾರೆ. ಶರಣರು ಅನ್ನ ದಾಸೋಹ ಮತ್ತು ಕಾಯಕ ದಾಸೋಹವನ್ನು ಆರಾಧಿಸುತ್ತಿದ್ದರು. ಯುವ ಸಮುದಾಯವು ಶರಣರ ಆದರ್ಶಗಳನ್ನುಬೆಳಸಿಕೊಳ್ಳಬೇಕು ಮತ್ತು ಸಮುದಾಯಕ್ಕೆ ಮಾದರಿಯಾಗುವಂತಹ ಕಾರ್ಯಗಳನ್ನು ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ ಹಾಗೂ ಪಂಗಡ ಆಯೋಗದ ಮಾಜಿ ಸದಸ್ಯರಾದ ವೆಂಕಟೇಶ್ ದೊಡ್ಡೇರಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಬಿ.ಎಸ್ ಅನುಪಮ, ಮುಖಂಡರುಗಳಾದ ಎಲ್ .ಸಂದೇಶ್, ಕೃಷ್ಣ, ತಮ್ಮಣ್ಣ, ಸಿ.ಕೆ ಪಾಪಯ್ಯ ಎನ್ .ಆರ್ ಚಂದ್ರಶೇಖರ್, ಕೆಂಪಣ್ಣ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…