ಮಂಡ್ಯ: ರಾಜ್ಯ ಸರ್ಕಾರವು ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ದರ ಏರಿಕೆ ನಿರ್ಧಾರವು ಜ.5 ರಂದು ಜಾರಿಗೆ ಬರಲಿದ್ದು, ಕೃಷಿ ಸಚಿವ ಚೆಲುವರಾಯಸ್ವಾಮಿ ಸರ್ಕಾರದ ಈ ನಿರ್ಧಾವನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ದರ ಏರಿಕೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿರತೆಗೆ ಆಗತ್ಯವಾಗಿದೆ ಎಂದು ಹೇಳಿದರು.
ಮುಂದುವರಿದು ಮಾತನಾಡುತ್ತಾ, ಬಸ್ ದರ ಹೆಚ್ಚಳ ಮಾಡಿ 10 ವರ್ಷ ಆಗಿದೆ. ಮಟನ್, ಬೇಳೆ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುತ್ತಲೆ ಇದೆ ಇದರ ಬಗ್ಗೆ ಮಾತನಾಡದ ಬಿಜೆಪಿ ಪಕ್ಷ ಈಗ ಪ್ರತಿಭಟನೆ ಮಾಡುತ್ತಿದೆ.
ಆಂಧ್ರ ಮತ್ತು ತಮಿಳುನಾಡಿನಲ್ಲಿ ಬಸ್ ಪ್ರಯಾಣ ದರ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ. 10 ವರ್ಷದಿಂದ ರಾಜ್ಯದಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ ಆಗಿಲ್ಲ. ದರ ಹೆಚ್ಚಳಕ್ಕೂ ಗ್ಯಾರಂಟಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ಚೆಲುವರಾಯಸ್ವಾಮಿ, ಎಚ್ಡಿಕೆ ಹೇಳಿ ನಾವು ಸರ್ಕಾರ ನಡೆಸಲು ಆಗುತ್ತಾ? ನಮ್ಮದು ಪ್ರಜಾಸತ್ತಾತ್ಮಕ ಸರ್ಕಾರ ಜನರು ನಮ್ಮ ಸರ್ಕಾರದ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…