ಮಂಡ್ಯ: ರಾಜ್ಯ ಸರ್ಕಾರವು ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ದರ ಏರಿಕೆ ನಿರ್ಧಾರವು ಜ.5 ರಂದು ಜಾರಿಗೆ ಬರಲಿದ್ದು, ಕೃಷಿ ಸಚಿವ ಚೆಲುವರಾಯಸ್ವಾಮಿ ಸರ್ಕಾರದ ಈ ನಿರ್ಧಾವನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ದರ ಏರಿಕೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿರತೆಗೆ ಆಗತ್ಯವಾಗಿದೆ ಎಂದು ಹೇಳಿದರು.
ಮುಂದುವರಿದು ಮಾತನಾಡುತ್ತಾ, ಬಸ್ ದರ ಹೆಚ್ಚಳ ಮಾಡಿ 10 ವರ್ಷ ಆಗಿದೆ. ಮಟನ್, ಬೇಳೆ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುತ್ತಲೆ ಇದೆ ಇದರ ಬಗ್ಗೆ ಮಾತನಾಡದ ಬಿಜೆಪಿ ಪಕ್ಷ ಈಗ ಪ್ರತಿಭಟನೆ ಮಾಡುತ್ತಿದೆ.
ಆಂಧ್ರ ಮತ್ತು ತಮಿಳುನಾಡಿನಲ್ಲಿ ಬಸ್ ಪ್ರಯಾಣ ದರ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ. 10 ವರ್ಷದಿಂದ ರಾಜ್ಯದಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ ಆಗಿಲ್ಲ. ದರ ಹೆಚ್ಚಳಕ್ಕೂ ಗ್ಯಾರಂಟಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ಚೆಲುವರಾಯಸ್ವಾಮಿ, ಎಚ್ಡಿಕೆ ಹೇಳಿ ನಾವು ಸರ್ಕಾರ ನಡೆಸಲು ಆಗುತ್ತಾ? ನಮ್ಮದು ಪ್ರಜಾಸತ್ತಾತ್ಮಕ ಸರ್ಕಾರ ಜನರು ನಮ್ಮ ಸರ್ಕಾರದ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು.
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…