ಮಂಡ್ಯ: ಕಚೇರಿಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಗಳು ಕಂಡು ಬಂದರೆ ಮಹಿಳೆಯರು ಯಾವುದೇ ರೀತಿಯ ಅಂಜಿಕೆ ಇಲ್ಲದೆ ಕಾನೂನಿನ ಅಡಿಯಲ್ಲಿ ರಕ್ಷಣೆ ಪಡೆಯಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾನೂನ್ನು ಅರಿಯಬೇಕು ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್ ಲತಾ ತಿಳಿಸಿದರು.
ಮಂಡ್ಯ ಪಿ ಇ ಎಸ್ ಇಂಜಿನಿಯರಿಂಗ್ ಕಾಲೇಜು ಆವರಣದ ಪ್ಲೇಸ್ಮೆಂಟ್ ಸಭಾಂಗಣದಲ್ಲಿ ಸೋಮವಾರ ನಡೆದ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿಗಳು, ಸಿಬ್ಬಂದಿಗಳು, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಲೈಂಗಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕುರಿತ ಕಾರ್ಯಾಗಾರದ ಮಹತ್ವ ತಿಳಿದು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಕೆಲವು ಮಹಿಳೆಯರು ತಾವು ಕೆಲಸ ಮಾಡುವಂತಹ ಸ್ಥಳಗಳಲ್ಲಿ ಅವರ ಮೇಲಾಗುವ ದೌರ್ಜನ್ಯದ ವಿರುದ್ದ ಹೊರಡಲು ಹಿಂದೆ ಉಳಿಯುತ್ತಾರೆ. ಜೊತೆಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವಿನ ಕೊರತೆ ಇರುತ್ತದೆ. ಇಂದು ಆಯೋಜಿಸಲಾಗಿರುವ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಒಂದು ದಿನದ ಕಾರ್ಯಾಗಾರದ ಮಹತ್ವವನ್ನು ಎಲ್ಲರೂ ತಿಳಿದು ತಮ್ಮ ಮೇಲಾಗುವ ಕಿರುಕುಳದಿಂದ ರಕ್ಷಣೆ ಪಡೆಯುವ ಕಾಯ್ದೆಗಳನ್ನು ತಿಳಿದುಕೊಳ್ಳಿ ಎಂದರು.
ಮಹಿಳೆಯರಿಗೆ ಮೂಲಭೂತ ಸೌಲಭ್ಯದ ಜೊತೆಗೆ ಗೌರವ ನೀಡಿ: ಡಾ ಕುಮಾರ
ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯವನ್ನು ಕೊಡುವುದರ ಜೊತೆಗೆ ಪ್ರತಿಯೊಬ್ಬ ಮಹಿಳೆಯನ್ನು ನಮ್ಮ ತಾಯಿ, ಸಹೋದರಿಯಂತೆ ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.
ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ತಡೆಗಟ್ಟುವ ಸಲುವಾಗಿ ಕಾನೂನಿನ ಅಡಿಯಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ರೂಪಿಸಲಾಗಿದೆ. ಕಾಯ್ದೆಗಿಂತ ಮುಖ್ಯವಾದದ್ದು ನಮ್ಮಲ್ಲಿರುವ ಸಂಸ್ಕಾರವಾಗಿದ್ದು, ಪ್ರತಿಯೊಬ್ಬ ಹೆಣ್ಣನ್ನು ಗೌರವದಿಂದ ಕಾಣಬೇಕು. ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದು, ತಾಯಿಯಂತೆ ಕಾಣುತ್ತೇವೆ ಎಂದರು.
ಒಬ್ಬ ಮಹಿಳೆಯು ಮಗಳಾಗಿ, ಅಕ್ಕಳಾಗಿ, ಹೆಂಡತಿಯಾಗಿ, ತಾಯಿಯಾಗಿ ಎಲ್ಲಾ ಪಾತ್ರಗಳನ್ನು ನಿರ್ವಹಿಸುತ್ತಾಳೆ. ಒಂದು ದೇಶದ ಅಭಿವೃದ್ಧಿಯನ್ನು ಅಳೆಯಬೇಕಾದರೆ ಆ ದೇಶದಲ್ಲಿ ಮಹಿಳೆಯರನ್ನು ಯಾವ ರೀತಿ ಕಾಣುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂಬ ನಾವು ಪಡೆಯಬೇಕಾದರೆ ಸ್ವಾಮಿ ವಿವೇಕಾನಂದರ ಮಾತನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಮಹಿಳೆಯರಿಗೆ ಗೌರವ ನೀಡುವ ಮೂಲಕ ದೇಶದ ಪ್ರಗತಿಯನ್ನು ಸಾಧಿಸಬೇಕು ಎಂದರು.
ನಮ್ಮ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯ/ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲು ಅವಕಾಶ ಮಾಡಿಕೊಟ್ಟಂತಹ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್ ಲತಾ ಮೇಡಂ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಎಂ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾಗಿ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಿಷಿ ಮದನ್, ಡಾ ಕ್ರಿಷಿನಾ ಕಾಂತಾರಾಜು, ಡಾ ಸ್ವಪ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…