ಮಂಡ್ಯ

ಕೆ.ಆರ್.ಎಸ್‌ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವರು

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕರು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯ ವೀಕ್ಷಿಸಿದರು.

ಕೆ.ಆರ್.ಎಸ್‌ನಲ್ಲಿ ನಡೆದ ಕಾಮಗಾರಿ ಪರೀಶಿಲನೆ ಸಭೆ ಬಳಿಕ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಕೆಆರ್.ಎಸ್‌ ನಾರ್ಥ್‌ ಬ್ಯಾಂಕಿನಿಂದ ಹುಲಿಕೆರೆ ಸುರಂಗದಲ್ಲಿ ನಡೆಯುತ್ತಿರುವ ಕಾಮಗಾರಿವರೆಗೆ ಸಚಿವರು ಹಾಗೂ ಶಾಸಕರು ಕಾಮಗಾರಿ ವೀಕ್ಷಿಸಿದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎನ್‌.ಚಲುವರಾಯಸ್ವಾಮಿ, ನಿಗಧಿತ ಅವಧಿಯೊಳಗೆ ನಾಲೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಲು ಸೂಚಿಸಿದ್ದೇನೆ. ಕಳಪೆ ಕಾಮಗಾರಿ ಕಂಡು ಬಂದರೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

ಆಧುನೀಕರಣ ಕಾಮಗಾರಿಯಿಂದ ವಿವಿಧ ತಾಲ್ಲೂಕುಗಳ ಕೊನೆಯ ಭಾಗಕ್ಕೂ ನೀರನ್ನು ಸುಲಭವಾಗಿ ತಲುಪಿಸಬಹುದು ಹಾಗೂ ಇದು ಶಾಶ್ವತ ಪರಿಹಾರವಾಗಿರುತ್ತದೆ. ಈ ನಾಲಾ ಭಾಗದಲ್ಲಿ ಬರುವ 18 ಕೆರೆಗಳಿಗೆ ನೀರು ತುಂಬಿಸಬಹುದು ಎಂದು ಸಚಿವರು ತಿಳಿಸಿದರು‌.

ಕೆ.ಆರ್.ಎಸ್ ನಿಂದ ನೀರು ಬಿಡುಗಡೆ ಮಾಡಲು ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ರೈತರ ಅವಶ್ಯಕತೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಸ್ಥಳೀಯ ರೈತರ ಅಭಿಪ್ರಾಯ ಆಲಿಸಿದ‌ ಸಚಿವರು ಕೃಷಿಕರ ಹಿತಕ್ಕಾಗಿ ಹೆಚ್ಚಿನ ಅನುದಾನ ತಂದು ಕಾಮಗಾರಿ ನಡೆಸಲಾಗುತ್ತಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ತಮ್ಮ ಆಶಯವಾಗಿದ್ದು ಅದಕ್ಕೆ ಜನರ ಸಹಕಾರವೂ ಅಗತ್ಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.

ಪರಿಶೀಲನೆಯ ವೇಳೆ ವಿಧಾನಸಭಾ ಶಾಸಕರಾದ ರಾಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿ ಕುಮಾರ್, ವಿಧಾನ ಪರಿಷತ್ ಶಾಸಕ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಕಾ.ನೀ.ನಿ.ನಿ ಅಧೀಕ್ಷಕ ಇಂಜಿನಿಯರ್ ರಘುರಾಂ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

45 mins ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

1 hour ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

2 hours ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

2 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

3 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

3 hours ago