ಮಂಡ್ಯ

ಕೆ.ಆರ್.ಎಸ್‌ ನಾಲಾ ಕಾಮಗಾರಿ ವೀಕ್ಷಿಸಿದ ಸಚಿವರು

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕರು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯ ವೀಕ್ಷಿಸಿದರು.

ಕೆ.ಆರ್.ಎಸ್‌ನಲ್ಲಿ ನಡೆದ ಕಾಮಗಾರಿ ಪರೀಶಿಲನೆ ಸಭೆ ಬಳಿಕ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಕೆಆರ್.ಎಸ್‌ ನಾರ್ಥ್‌ ಬ್ಯಾಂಕಿನಿಂದ ಹುಲಿಕೆರೆ ಸುರಂಗದಲ್ಲಿ ನಡೆಯುತ್ತಿರುವ ಕಾಮಗಾರಿವರೆಗೆ ಸಚಿವರು ಹಾಗೂ ಶಾಸಕರು ಕಾಮಗಾರಿ ವೀಕ್ಷಿಸಿದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎನ್‌.ಚಲುವರಾಯಸ್ವಾಮಿ, ನಿಗಧಿತ ಅವಧಿಯೊಳಗೆ ನಾಲೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಲು ಸೂಚಿಸಿದ್ದೇನೆ. ಕಳಪೆ ಕಾಮಗಾರಿ ಕಂಡು ಬಂದರೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

ಆಧುನೀಕರಣ ಕಾಮಗಾರಿಯಿಂದ ವಿವಿಧ ತಾಲ್ಲೂಕುಗಳ ಕೊನೆಯ ಭಾಗಕ್ಕೂ ನೀರನ್ನು ಸುಲಭವಾಗಿ ತಲುಪಿಸಬಹುದು ಹಾಗೂ ಇದು ಶಾಶ್ವತ ಪರಿಹಾರವಾಗಿರುತ್ತದೆ. ಈ ನಾಲಾ ಭಾಗದಲ್ಲಿ ಬರುವ 18 ಕೆರೆಗಳಿಗೆ ನೀರು ತುಂಬಿಸಬಹುದು ಎಂದು ಸಚಿವರು ತಿಳಿಸಿದರು‌.

ಕೆ.ಆರ್.ಎಸ್ ನಿಂದ ನೀರು ಬಿಡುಗಡೆ ಮಾಡಲು ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ರೈತರ ಅವಶ್ಯಕತೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಸ್ಥಳೀಯ ರೈತರ ಅಭಿಪ್ರಾಯ ಆಲಿಸಿದ‌ ಸಚಿವರು ಕೃಷಿಕರ ಹಿತಕ್ಕಾಗಿ ಹೆಚ್ಚಿನ ಅನುದಾನ ತಂದು ಕಾಮಗಾರಿ ನಡೆಸಲಾಗುತ್ತಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ತಮ್ಮ ಆಶಯವಾಗಿದ್ದು ಅದಕ್ಕೆ ಜನರ ಸಹಕಾರವೂ ಅಗತ್ಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.

ಪರಿಶೀಲನೆಯ ವೇಳೆ ವಿಧಾನಸಭಾ ಶಾಸಕರಾದ ರಾಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಪಿ.ರವಿ ಕುಮಾರ್, ವಿಧಾನ ಪರಿಷತ್ ಶಾಸಕ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಕಾ.ನೀ.ನಿ.ನಿ ಅಧೀಕ್ಷಕ ಇಂಜಿನಿಯರ್ ರಘುರಾಂ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

7 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

12 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

18 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago