ಮಂಡ್ಯ

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್

ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ ಬೀದಿನಾಯಿಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಈ ಸನ್ನಿವೇಷವನ್ನೇ ಬದಲಾಯಿಸಿ ಆರೋಗ್ಯಕರ ಸುಂದರ ಪರಿಸರಕ್ಕೆ ಕೈಜೋಡಿಸಿರುವ ಡಾ.ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನ ಸದ್ದಿಲ್ಲದೆ ಕಾರ್ಯನಿರತವಾಗಿದೆ.

ದಸಂಸ ನಾಯಕರಾಗಿದ್ದ ಡಾ.ಎಂ.ಬಿ.ಶ್ರೀನಿವಾಸ್ ಅವರು ಬದುಕಿದ್ದಾಗ ಹತ್ತು ಹಲವು ಹೋರಾಟಗಳ ಮೂಲಕ ಜನಮನ ಸೆಳೆದಿದ್ದರು. ಅವರ ನಿಧನ ನಂತರ ಅವರ ಪುತ್ರ ರಾಹುಲ್ ಪಿ.ಶ್ರೀನಿವಾಸ್ ಹಾಗೂ ಗೆಳೆಯರ ಬಳಗ ಒಂದು ತಂಡ ಕಟ್ಟಿಕೊಂಡು ಡಾ.ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನ ರಚಿಸಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ಕೋವಿಡ್ ಸಮಯದಲ್ಲಿ ಜಿಲ್ಲೆಯ ವಿವಿಧೆಡೆ ಸಾಕಷ್ಟು ಕುಟುಂಬಗಳಿಗೆ ಆಹಾರದ ಕಿಟ್ ಒದಗಿಸಿದ್ದು, ಗಣೇಶ ಉತ್ಸವಗಳಲ್ಲಿ ರಕ್ತದಾನ ಶಿಬಿರ, ನೇತ್ರ ತಪಾಸಣೆ, ಕನ್ನಡಕ ವಿತರಣೆ, ಮುಸ್ಲಿಂ ಯುವಕರೂ ಕೂಡ ಗಣೇಶ ಉತ್ಸವದಲ್ಲಿ ಪಾಲ್ಗೊಂಡು ಅನ್ನಸಂತರ್ಪಣೆ ನಡೆಸುವ ಸೌಹಾರ್ಧತೆ ಸಾರಿದ್ದು, ಹೀಗೆ ಅನೇಕ ಸೇವಾ ಕಾರ್ಯ ನಡೆಸಿದ್ದ ಈ ಬಳಗವು ಯಾವುದೇ ಪ್ರಚಾರಕ್ಕೆ ಬಾರದೆ, ಸದ್ದುಗದ್ದಲವಿಲ್ಲದೆ ಸಮಾಜ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ.

ಇದೀಗ ಮಂಡ್ಯದ ಅಶೋಕನಗರದಲ್ಲಿನ ಕೆಲ ರಸ್ತೆಗಳ ಇಕ್ಕೆಲಗಳನ್ನೂ ಸ್ವಚ್ಛಗೊಳಿಸಿ, ಜನರು ಮಲಮೂತ್ರ ಮಾಡದಂತೆ ಗೋಡೆ ಬರಹದ ಮೂಲಕ ಜಾಗೃತಿ ಮೂಡಿಸಿ, ಸಸಿಗಳನ್ನು ನೆಟ್ಟು ಟ್ರೀಗಾರ್ಡ್ ಹಾಕಿಸಿ ನಗರಸಭೆಯ ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದೆ ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನ.

ಪ್ರತಿಷ್ಠಾನದ ಅಧ್ಯಕ್ಷ ರಾಹುಲ್ ಅವರು ತಮ್ಮ ತಂಡದ ರಕ್ಷಿತ್, ಚಂದನ್, ಪ್ರಮೋದ್, ಅಭಿ, ಮಿಥಿಲ್, ಸೂರ್ಯ, ಅಲ್ತಾಫ್, ಸಚಿನ್, ಮನೋಜ್ಞ, ಲಿಖಿತ್ ಮುಂತಾದವರೊಂದಿಗೆ ನಡೆಸುತ್ತಿರುವ ಈ ಸ್ವಚ್ಛತಾ ಸೇವೆಗೆ ಸ್ಥಳೀಯ ನಿವಾಸಿಗಳು ಶ್ಲಾಘಿಸಿದ್ದಾರೆ. ಇದು ಇತರೆ ಸಂಘ ಸಂಸ್ಥೆಗಳಿಗೂ ಮಾದರಿಯಾದುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

” ನಮ್ಮ ಡಾ.ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನದ ವತಿಯಿಂದ ಸರ್ಕಾರಿ ಶಾಲೆಯ ಸುಮಾರು ಮುನ್ನೂರು ಮಕ್ಕಳಿಗೆ ಬ್ಯಾಗ್ ವಿತರಣೆ, ನಾಲ್ಕು ರಕ್ತದಾನ ಶಿಬಿರಗಳು, ಹತ್ತು ಮಂದಿ ವಿಶೇಷಚೇತನರಿಗೆ ವ್ಹೀಲ್‌ಚೇರ್ ವಿತರಣೆ ಮುಂತಾದ ಸೇವಾ ಕಾರ್ಯ ಮಾಡಿದ್ದೇವೆ. ಇದೀಗ ಸ್ವಚ್ಛತೆಯೆಡೆಗೆ ಹೆಚ್ಚು ಗಮನ ನೀಡಿದ್ದೇವೆ.”

-ರಾಹುಲ್ ಪಿ.ಶ್ರೀನಿವಾಸ್, ಪ್ರತಿಷ್ಠಾನದ ಅಧ್ಯಕ್ಷರು.

” ಮಂಡ್ಯ ನಗರದಲ್ಲಿ ಹಲವು ಕಡೆಗಳಲ್ಲಿ ಡಾ.ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನದ ವತಿಯಿಂದ ಕ್ಲೀನ್ ಟುಡೆ-ಗ್ರೀನ್ ಟುಮಾರೋ ಎನ್ನುವ ಆಡಿಬರಹದೊಂದಿಗೆ ಸ್ವಚ್ಛತಾ ಡ್ರೆöÊವ್ ಹಮ್ಮಿಕೊಂಡು ಸ್ವಚ್ಛತೆ ಜೊತೆಗೆ ಪ್ಲಾಂಟೇಷನ್ ಕೂಡ ಮಾಡಿಕೊಂಡು ಪರಿಸರ ಜಾಗೃತಿ ಮೂಡಿಸುತ್ತಿದ್ದು, ಈ ಸಂದರ್ಭದಲ್ಲಿ ನಗರಸಭೆ ವತಿಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನ ಹಮ್ಮಿಕೊಂಡಿರುವುದಕ್ಕೆ ಪೂರಕವಾಗಿದೆ. ಈ ಒಂದು ತಂಡದ ಸ್ವಚ್ಛ ಮನಸ್ಸುಗಳಿಗೆ ಹೃದಯ ಪೂರ್ವಕ ಅಭಿನಂದನೆಗಳನ್ನು ಅರ್ಪಿಸುತ್ತಿದ್ದೇನೆ. ಹಾಗೂ ಈ ಒಂದು ಶ್ಲಾಘನೀಯ ಕಾರ್ಯದಲ್ಲಿ ಎಲ್ಲಾ ಸಾರ್ವಜನಿಕರು ಭಾಗವಹಿಸಬೇಕೆಂದು ಕೋರುತ್ತೇನೆ.”

-ಪಂಪಾಶ್ರೀ, ಆಯುಕ್ತರು, ನಗರಸಭೆ, ಮಂಡ್ಯ.

” ಯುವಜನತೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು. ಒಂದು ತಂಡ ಕಟ್ಟಿ ಸೇವಾ ಕಾರ್ಯಕ್ಕೆ ನಿಂತಿರುವ ರಾಹುಲ್ ಪಿ.ಶ್ರೀನಿವಾಸ್ ಅವರು ತಮ್ಮ ತಂದೆಯAತೆ ಸಾಮಾಜಿಕ ಸೇವಾ ಕಾರ್ಯಕ್ಕೆ ನಿಂತಿರುವುದು ಮಾದರಿಯಾಗಿದೆ. ಅವರ ಪ್ರತಿಷ್ಠಾನದ ವತಿಯಿಂದ ಸಮಾಜಕ್ಕೆ ಒಳಿತಾಗಲೆಂಬ ಆಶಯ ನಮ್ಮದು.”

-ಎಂ.ಬಿ.ರಮೇಶ್, ಅಧ್ಯಕ್ಷರು, ವಿಶ್ವಕರ್ಮ ಸೇವಾ ಟ್ರಸ್ಟ್, ಮಂಡ್ಯ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago