ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800 ಎಕರೆ ಅರಣ್ಯ ಭೂಮಿ ಮುಳುಗಡೆಯಾಗಲಿದ್ದು, 12 ಲಕ್ಷಕ್ಕೂ ಅಧಿಕ ಮರಗಳು ನಾಶವಾಗಲಿವೆ. ಇದು ಇಡೀ ಪರಿಸರ ವ್ಯವಸ್ಥೆಗೆ ತುಂಬಲಾರದ ನಷ್ಟವಾಗಲಿದೆ ಎಂದು ಖ್ಯಾತ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಎಚ್ಚರಿಸಿದರು.
ನಗರದ ಗಾಂಧಿ ಭವನದಲ್ಲಿ ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಆಪ್ತ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಮನಗರದ ಕನಕಪುರ ಬಳಿ ನಿರ್ಮಿಸಲು ಉದ್ದೇಶಿಸಿರುವ ಸಮತೋಲನ ಅಣೆಕಟ್ಟಿನ ಬದಲಿಗೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದಲ್ಲಿ ಅಣೆಕಟ್ಟು ನಿರ್ಮಿಸುವುದು ಪರಿಸರ ದೃಷ್ಟಿಯಿಂದ ಸೂಕ್ತ. ಅಲ್ಲಿರುವ 8 ಮಿನಿ ಜಲವಿದ್ಯುತ್ ಘಟಕಗಳ ಹಿತಾಸಕ್ತಿ ಕಾಪಾಡುವ ಸಲುವಾಗಿ ಜನಪ್ರತಿನಿಧಿಗಳು ಈ ಪರ್ಯಾಯ ಮಾರ್ಗದ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ವಿಷಾದಿಸಿದರು.
ಪರಿಸರ ಹೋರಾಟದ ಸ್ವರೂಪ ಬದಲಾಗಬೇಕಿದೆ. ಬೀದಿಗಿಳಿದು ಘೋಷಣೆ ಕೂಗುವುದು ಮಾತ್ರ ಸಂರಕ್ಷಣೆಯಲ್ಲ. ವನ್ಯಜೀವಿ ಸಂರಕ್ಷಕರು ಹಾನಿಯ ಬಗ್ಗೆ ನಿಖರ ದಾಖಲೆಗಳನ್ನು ಸಿದ್ಧಪಡಿಸಿ ರಾಜಕಾರಣಿಗಳಿಗೆ ಮನವರಿಕೆ ಮಾಡಿಕೊಟ್ಟಾಗ ಮಾತ್ರ ಶಾಶ್ವತ ಬದಲಾವಣೆ ಸಾಧ್ಯವಾಗಲಿದೆ. ಕುದುರೆಮುಖದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಮತ್ತು ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಲು ಈ ಹಾದಿಯೇ ನಮಗೆ ಯಶಸ್ಸು ತಂದುಕೊಟ್ಟಿದೆ ಎಂದು ವಿವರಿಸಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಶೇ.70ರಷ್ಟು ಚಿರತೆ ದಾಳಿ ಪ್ರಕರಣಗಳು ನಡೆಯುತ್ತಿವೆ. ಆವಾಸಸ್ಥಾನಗಳ ನಾಶ ಮತ್ತು ಚಿರತೆಗಳ ಅವೈಜ್ಞಾನಿಕ ಸ್ಥಳಾಂತರವೇ ಇದಕ್ಕೆ ಮುಖ್ಯ ಕಾರಣ. ಇನ್ನು ಇಂದಿನ ಸಫಾರಿ ಸಂಸ್ಕೃತಿಯು ಕೇವಲ ಮೋಜು-ಮಸ್ತಿಯಾಗಿ ಬದಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್ ಗಿಟ್ಟಿಸಲು ಹುಲಿ-ಚಿರತೆ ನೋಡುವ ಬದಲು, ನಮ್ಮ ಸುತ್ತಲ ಪ್ರಕೃತಿಯ ಕ್ರಿಮಿಕೀಟ, ಪಕ್ಷಿ ಮತ್ತು ಮರಗಳ ವೈವಿಧ್ಯತೆಯನ್ನು ಅರಿಯುವುದೇ ನಿಜವಾದ ಸಫಾರಿ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಸಂಜಯ್ ಗುಬ್ಬಿ ಅವರ ಮುಂದಿನ ಕೃತಿಗಳಾದ ‘ಕಾಡಿನೊಳಗೊಂದು ಮನೆಯ ಮಾಡಿ’ ಮತ್ತು ‘ಕಾಡಿನ ಗೆಳೆಯರ ಕಾಡುವ ಕತೆಗಳು’ ಎಂಬ ಹೊಸ ಪುಸ್ತಕಗಳ ಬಗ್ಗೆ ಮಾಹಿತಿ ನೀಡಲಾಯಿತು.
ಲೇಖಕ ಹಾಗೂ ಕಿರುಚಿತ್ರ ನಿರ್ದೇಶಕ ವಿನಯ್ ಕುಮಾರ್ ಎಂ.ಜಿ. ಸಂವಾದವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಸಿಎಫ್ ಮಹದೇವಸ್ವಾಮಿ, ಡಿಎಸ್ಎಸ್ ಹಿರಿಯ ಮುಖಂಡ ಪ್ರೊ. ಚಂದ್ರಶೇಖರನ್, ಸಹಾಯಕ ಸರ್ಕಾರಿ ಅಭಿಯೋಜಕಿ ರತಿಕುಮಾರಿ, ಪತ್ರಕರ್ತ ಸಿದ್ದು ಆರ್.ಜಿ. ಹಳ್ಳಿ ಸೇರಿದಂತೆ ವಿವಿಧ ವಲಯದ ಗಣ್ಯರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…