ಮಂಡ್ಯ

ಪರಿಸರ ಬಲಿಯಾಗದಂತೆ ಯೋಜನೆ ರೂಪುಗೊಳ್ಳಲಿ: ಸಂಜಯ್ ಗುಬ್ಬಿ

ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800 ಎಕರೆ ಅರಣ್ಯ ಭೂಮಿ ಮುಳುಗಡೆಯಾಗಲಿದ್ದು, 12 ಲಕ್ಷಕ್ಕೂ ಅಧಿಕ ಮರಗಳು ನಾಶವಾಗಲಿವೆ. ಇದು ಇಡೀ ಪರಿಸರ ವ್ಯವಸ್ಥೆಗೆ ತುಂಬಲಾರದ ನಷ್ಟವಾಗಲಿದೆ ಎಂದು ಖ್ಯಾತ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಎಚ್ಚರಿಸಿದರು.

ನಗರದ ಗಾಂಧಿ ಭವನದಲ್ಲಿ ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಆಪ್ತ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಮನಗರದ ಕನಕಪುರ ಬಳಿ ನಿರ್ಮಿಸಲು ಉದ್ದೇಶಿಸಿರುವ ಸಮತೋಲನ ಅಣೆಕಟ್ಟಿನ ಬದಲಿಗೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದಲ್ಲಿ ಅಣೆಕಟ್ಟು ನಿರ್ಮಿಸುವುದು ಪರಿಸರ ದೃಷ್ಟಿಯಿಂದ ಸೂಕ್ತ. ಅಲ್ಲಿರುವ 8 ಮಿನಿ ಜಲವಿದ್ಯುತ್ ಘಟಕಗಳ ಹಿತಾಸಕ್ತಿ ಕಾಪಾಡುವ ಸಲುವಾಗಿ ಜನಪ್ರತಿನಿಧಿಗಳು ಈ ಪರ್ಯಾಯ ಮಾರ್ಗದ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ವಿಷಾದಿಸಿದರು.

ಪರಿಸರ ಹೋರಾಟದ ಸ್ವರೂಪ ಬದಲಾಗಬೇಕಿದೆ. ಬೀದಿಗಿಳಿದು ಘೋಷಣೆ ಕೂಗುವುದು ಮಾತ್ರ ಸಂರಕ್ಷಣೆಯಲ್ಲ. ವನ್ಯಜೀವಿ ಸಂರಕ್ಷಕರು ಹಾನಿಯ ಬಗ್ಗೆ ನಿಖರ ದಾಖಲೆಗಳನ್ನು ಸಿದ್ಧಪಡಿಸಿ ರಾಜಕಾರಣಿಗಳಿಗೆ ಮನವರಿಕೆ ಮಾಡಿಕೊಟ್ಟಾಗ ಮಾತ್ರ ಶಾಶ್ವತ ಬದಲಾವಣೆ ಸಾಧ್ಯವಾಗಲಿದೆ. ಕುದುರೆಮುಖದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಮತ್ತು ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಲು ಈ ಹಾದಿಯೇ ನಮಗೆ ಯಶಸ್ಸು ತಂದುಕೊಟ್ಟಿದೆ ಎಂದು ವಿವರಿಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಶೇ.70ರಷ್ಟು ಚಿರತೆ ದಾಳಿ ಪ್ರಕರಣಗಳು ನಡೆಯುತ್ತಿವೆ. ಆವಾಸಸ್ಥಾನಗಳ ನಾಶ ಮತ್ತು ಚಿರತೆಗಳ ಅವೈಜ್ಞಾನಿಕ ಸ್ಥಳಾಂತರವೇ ಇದಕ್ಕೆ ಮುಖ್ಯ ಕಾರಣ. ಇನ್ನು ಇಂದಿನ ಸಫಾರಿ ಸಂಸ್ಕೃತಿಯು ಕೇವಲ ಮೋಜು-ಮಸ್ತಿಯಾಗಿ ಬದಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್ ಗಿಟ್ಟಿಸಲು ಹುಲಿ-ಚಿರತೆ ನೋಡುವ ಬದಲು, ನಮ್ಮ ಸುತ್ತಲ ಪ್ರಕೃತಿಯ ಕ್ರಿಮಿಕೀಟ, ಪಕ್ಷಿ ಮತ್ತು ಮರಗಳ ವೈವಿಧ್ಯತೆಯನ್ನು ಅರಿಯುವುದೇ ನಿಜವಾದ ಸಫಾರಿ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಂಜಯ್ ಗುಬ್ಬಿ ಅವರ ಮುಂದಿನ ಕೃತಿಗಳಾದ ‘ಕಾಡಿನೊಳಗೊಂದು ಮನೆಯ ಮಾಡಿ’ ಮತ್ತು ‘ಕಾಡಿನ ಗೆಳೆಯರ ಕಾಡುವ ಕತೆಗಳು’ ಎಂಬ ಹೊಸ ಪುಸ್ತಕಗಳ ಬಗ್ಗೆ ಮಾಹಿತಿ ನೀಡಲಾಯಿತು.

ಲೇಖಕ ಹಾಗೂ ಕಿರುಚಿತ್ರ ನಿರ್ದೇಶಕ ವಿನಯ್ ಕುಮಾರ್ ಎಂ.ಜಿ. ಸಂವಾದವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಸಿಎಫ್ ಮಹದೇವಸ್ವಾಮಿ, ಡಿಎಸ್ಎಸ್ ಹಿರಿಯ ಮುಖಂಡ ಪ್ರೊ. ಚಂದ್ರಶೇಖರನ್, ಸಹಾಯಕ ಸರ್ಕಾರಿ ಅಭಿಯೋಜಕಿ ರತಿಕುಮಾರಿ, ಪತ್ರಕರ್ತ ಸಿದ್ದು ಆರ್.ಜಿ. ಹಳ್ಳಿ ಸೇರಿದಂತೆ ವಿವಿಧ ವಲಯದ ಗಣ್ಯರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago