ಮಂಡ್ಯ

ಪರಿಸರ ಬಲಿಯಾಗದಂತೆ ಯೋಜನೆ ರೂಪುಗೊಳ್ಳಲಿ: ಸಂಜಯ್ ಗುಬ್ಬಿ

ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800 ಎಕರೆ ಅರಣ್ಯ ಭೂಮಿ ಮುಳುಗಡೆಯಾಗಲಿದ್ದು, 12 ಲಕ್ಷಕ್ಕೂ ಅಧಿಕ ಮರಗಳು ನಾಶವಾಗಲಿವೆ. ಇದು ಇಡೀ ಪರಿಸರ ವ್ಯವಸ್ಥೆಗೆ ತುಂಬಲಾರದ ನಷ್ಟವಾಗಲಿದೆ ಎಂದು ಖ್ಯಾತ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಎಚ್ಚರಿಸಿದರು.

ನಗರದ ಗಾಂಧಿ ಭವನದಲ್ಲಿ ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಆಪ್ತ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಮನಗರದ ಕನಕಪುರ ಬಳಿ ನಿರ್ಮಿಸಲು ಉದ್ದೇಶಿಸಿರುವ ಸಮತೋಲನ ಅಣೆಕಟ್ಟಿನ ಬದಲಿಗೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದಲ್ಲಿ ಅಣೆಕಟ್ಟು ನಿರ್ಮಿಸುವುದು ಪರಿಸರ ದೃಷ್ಟಿಯಿಂದ ಸೂಕ್ತ. ಅಲ್ಲಿರುವ 8 ಮಿನಿ ಜಲವಿದ್ಯುತ್ ಘಟಕಗಳ ಹಿತಾಸಕ್ತಿ ಕಾಪಾಡುವ ಸಲುವಾಗಿ ಜನಪ್ರತಿನಿಧಿಗಳು ಈ ಪರ್ಯಾಯ ಮಾರ್ಗದ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ವಿಷಾದಿಸಿದರು.

ಪರಿಸರ ಹೋರಾಟದ ಸ್ವರೂಪ ಬದಲಾಗಬೇಕಿದೆ. ಬೀದಿಗಿಳಿದು ಘೋಷಣೆ ಕೂಗುವುದು ಮಾತ್ರ ಸಂರಕ್ಷಣೆಯಲ್ಲ. ವನ್ಯಜೀವಿ ಸಂರಕ್ಷಕರು ಹಾನಿಯ ಬಗ್ಗೆ ನಿಖರ ದಾಖಲೆಗಳನ್ನು ಸಿದ್ಧಪಡಿಸಿ ರಾಜಕಾರಣಿಗಳಿಗೆ ಮನವರಿಕೆ ಮಾಡಿಕೊಟ್ಟಾಗ ಮಾತ್ರ ಶಾಶ್ವತ ಬದಲಾವಣೆ ಸಾಧ್ಯವಾಗಲಿದೆ. ಕುದುರೆಮುಖದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಮತ್ತು ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಲು ಈ ಹಾದಿಯೇ ನಮಗೆ ಯಶಸ್ಸು ತಂದುಕೊಟ್ಟಿದೆ ಎಂದು ವಿವರಿಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಶೇ.70ರಷ್ಟು ಚಿರತೆ ದಾಳಿ ಪ್ರಕರಣಗಳು ನಡೆಯುತ್ತಿವೆ. ಆವಾಸಸ್ಥಾನಗಳ ನಾಶ ಮತ್ತು ಚಿರತೆಗಳ ಅವೈಜ್ಞಾನಿಕ ಸ್ಥಳಾಂತರವೇ ಇದಕ್ಕೆ ಮುಖ್ಯ ಕಾರಣ. ಇನ್ನು ಇಂದಿನ ಸಫಾರಿ ಸಂಸ್ಕೃತಿಯು ಕೇವಲ ಮೋಜು-ಮಸ್ತಿಯಾಗಿ ಬದಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್ ಗಿಟ್ಟಿಸಲು ಹುಲಿ-ಚಿರತೆ ನೋಡುವ ಬದಲು, ನಮ್ಮ ಸುತ್ತಲ ಪ್ರಕೃತಿಯ ಕ್ರಿಮಿಕೀಟ, ಪಕ್ಷಿ ಮತ್ತು ಮರಗಳ ವೈವಿಧ್ಯತೆಯನ್ನು ಅರಿಯುವುದೇ ನಿಜವಾದ ಸಫಾರಿ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಂಜಯ್ ಗುಬ್ಬಿ ಅವರ ಮುಂದಿನ ಕೃತಿಗಳಾದ ‘ಕಾಡಿನೊಳಗೊಂದು ಮನೆಯ ಮಾಡಿ’ ಮತ್ತು ‘ಕಾಡಿನ ಗೆಳೆಯರ ಕಾಡುವ ಕತೆಗಳು’ ಎಂಬ ಹೊಸ ಪುಸ್ತಕಗಳ ಬಗ್ಗೆ ಮಾಹಿತಿ ನೀಡಲಾಯಿತು.

ಲೇಖಕ ಹಾಗೂ ಕಿರುಚಿತ್ರ ನಿರ್ದೇಶಕ ವಿನಯ್ ಕುಮಾರ್ ಎಂ.ಜಿ. ಸಂವಾದವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಸಿಎಫ್ ಮಹದೇವಸ್ವಾಮಿ, ಡಿಎಸ್ಎಸ್ ಹಿರಿಯ ಮುಖಂಡ ಪ್ರೊ. ಚಂದ್ರಶೇಖರನ್, ಸಹಾಯಕ ಸರ್ಕಾರಿ ಅಭಿಯೋಜಕಿ ರತಿಕುಮಾರಿ, ಪತ್ರಕರ್ತ ಸಿದ್ದು ಆರ್.ಜಿ. ಹಳ್ಳಿ ಸೇರಿದಂತೆ ವಿವಿಧ ವಲಯದ ಗಣ್ಯರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಂಡರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago