ಮಂಡ್ಯ

ಸಂವಿಧಾನ ಪ್ರಸ್ತಾವನೆ ಓದಿದ ಪ್ರತಿಭಟನಾನಿರತರು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿ ನಡೆಸುತ್ತಿರುವ ಧರಣಿಯಲ್ಲಿ ಹೋರಾಟಗಾರರು ಭಾರತದ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿ ವೇಳೆ ಕಾವೇರಿ ಹೋರಾಟಗಾರರು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಮಾಡಿದರು.

ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ,ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ, ನಮ್ಮ ಸಂವಿಧಾನ ಸಭೆಯಲ್ಲಿ 1949 ನೆ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ,ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ “ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಓದಿದಾಗ ಇತರ ಹೋರಾಟಗಾರರು ದನಿಗೂಡಿಸಿ ಪ್ರತಿಜ್ಞೆ ಸ್ವೀಕರಿಸಿದರು.

ರೈತ ಹಿತರಕ್ಷಣಾ ಸಮಿತಿಯ ಸುನಂದ ಜಯರಾಂ, ಕೆ.ಬೋರಯ್ಯ ಗುರುಪ್ರಸಾದ್ ಕೆರಗೋಡು,ರೈತ ಸಂಘದ ಇಂಡವಾಳು ಚಂದ್ರಶೇಖರ್. ಮುದ್ದೇಗೌಡ, ಕೀಲಾರ ಕೃಷ್ಣ,ದಸಂಸ ಎಂ. ವಿ ಕೃಷ್ಣ ಕರ್ನಾಟಕ ರಕ್ಷಣಾ ವೇದಿಕೆ ಮಾ.ಸೋ. ಚಿದಂಬರ್, ಸೌಭಾಗ್ಯ ಮಹಾದೇವ್.ಶಂಕರೇಗೌಡ ಕಬ್ಬು ಬೆಳೆಗಾರರ ಸಂಘದ ಶಂಭೂನಹಳ್ಳಿ ಕೃಷ್ಣ ನೇತೃತ್ವ ವಹಿಸಿದ್ದರು.

lokesh

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago