ಮಂಡ್ಯ

ಸಂವಿಧಾನ ಪ್ರಸ್ತಾವನೆ ಓದಿದ ಪ್ರತಿಭಟನಾನಿರತರು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿ ನಡೆಸುತ್ತಿರುವ ಧರಣಿಯಲ್ಲಿ ಹೋರಾಟಗಾರರು ಭಾರತದ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿ ವೇಳೆ ಕಾವೇರಿ ಹೋರಾಟಗಾರರು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಮೂಲಕ ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಮಾಡಿದರು.

ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ,ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ, ನಮ್ಮ ಸಂವಿಧಾನ ಸಭೆಯಲ್ಲಿ 1949 ನೆ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ,ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ “ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಓದಿದಾಗ ಇತರ ಹೋರಾಟಗಾರರು ದನಿಗೂಡಿಸಿ ಪ್ರತಿಜ್ಞೆ ಸ್ವೀಕರಿಸಿದರು.

ರೈತ ಹಿತರಕ್ಷಣಾ ಸಮಿತಿಯ ಸುನಂದ ಜಯರಾಂ, ಕೆ.ಬೋರಯ್ಯ ಗುರುಪ್ರಸಾದ್ ಕೆರಗೋಡು,ರೈತ ಸಂಘದ ಇಂಡವಾಳು ಚಂದ್ರಶೇಖರ್. ಮುದ್ದೇಗೌಡ, ಕೀಲಾರ ಕೃಷ್ಣ,ದಸಂಸ ಎಂ. ವಿ ಕೃಷ್ಣ ಕರ್ನಾಟಕ ರಕ್ಷಣಾ ವೇದಿಕೆ ಮಾ.ಸೋ. ಚಿದಂಬರ್, ಸೌಭಾಗ್ಯ ಮಹಾದೇವ್.ಶಂಕರೇಗೌಡ ಕಬ್ಬು ಬೆಳೆಗಾರರ ಸಂಘದ ಶಂಭೂನಹಳ್ಳಿ ಕೃಷ್ಣ ನೇತೃತ್ವ ವಹಿಸಿದ್ದರು.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago