ಮಂಡ್ಯ

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ ಹಾಗೂ ಎಲ್ಲಾ ಇಲಾಖೆಗಳಿಂದ ವಿಭಿನ್ನ ರೀತಿಯಲ್ಲಿ ಇಲಾಖೆಯ ಸೌಲಭ್ಯಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ ಮಾಡಲಾಗಿದ್ದು, ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಹೇಳಿದರು.

ಇಂದು ಮಂಡ್ಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಇವರ ಸಂಯುಕ್ತ ಸಂಯುಕ್ತ ಆಶ್ರಯದಲ್ಲಿ ತೋಟಗಾರಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನ 2026 ರ ಕಾರ್ಯಕ್ರಮವನ್ನು ತೋಟಗಾರಿಕೆಯ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕೃಷಿ ಇಲಾಖೆ ವತಿಯಿಂದ ರೈತ ಮಹಿಳೆಯರು ಉದ್ಯಮಿಯಾಗಿ ಪರಿವರ್ತನೆಯಾಗಲು ಹಾಗೂ ಕೃಷಿ ಇಲಾಖೆಯ ವತಿಯಿಂದ ನೀಡಲಾಗುವ ವಿವಿಧ ಅವಕಾಶಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಕೃಷಿ ಇಲಾಖೆಯಿಂದ ರೈತ ಮಹಿಳೆಯರಿಗೆ ಉತ್ತೇಜನ ನೀಡಲು ಯಾಂತ್ರೀಕೃತ ಭತ್ತ ನಾಟಿ ಮಾಡುವ ಯಂತ್ರ ಮತ್ತು ರೈತ ಮಹಿಳೆಯನ್ನು ಹೂವಿನ ಕಲಾಕೃತಿಯಲ್ಲಿ ಪ್ರದರ್ಶಿಸಲಾಗಿದೆ ಎಂದು ಹೇಳಿದರು.

ತಾಯಿಯ ಎದೆ ಹಾಲಿನ ಮಹತ್ವ ಕುರಿತು ಸಂದೇಶ ಸಾರಲು ವಿಶೇಷವಾಗಿ ತಾಯಿ ಮಗುವಿಗೆ ಎದೆಹಾಲು ಉಣಿಸುತ್ತಿರುವ ಕಲಾಕೃತಿಯನ್ನು ಪುಷ್ಪ ಪ್ರದರ್ಶನ ಮಾಡಲಾಗಿದೆ. ಫಲಪುಷ್ಪ ಪ್ರದರ್ಶನದ ಟಿಕೆಟ್ ದರವನ್ನು ವಯಸ್ಕರಿಗೆ ರೂ 30, ಮಕ್ಕಳಿಗೆ ರೂ 20 ಮತ್ತು ಶಾಲಾ ವಿದ್ಯಾರ್ಥಿಗಳಿಗೆ (ಯೂನಿಫಾರ್ಮ್ ನಲ್ಲಿ ಬರುವ ಮಕ್ಕಳಿಗೆ) ಉಚಿತ ಎಂದು ತಿಳಿಸಿದರು.

ರೇಷ್ಮೆ ಇಲಾಖೆಯಿಂದ ರೇಷ್ಮೆ ಹುಳುವಿನ ಕಲಾಕೃತಿ ಪ್ರದರ್ಶನ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ವತಿಯಿಂದ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳ ಪ್ರವಾಸ ತಾಣಗಳ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಜಿಲ್ಲಾ ಎಲ್ಲಾ ಯುವಜನತೆ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡು ಅದರ ಉಪಯೋಗ ಮತ್ತು ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದರು.

ನಂತರ ಎನ್ ಚಲುವರಾಯಸ್ವಾಮಿ ಅವರು ಫಲಪುಷ್ಪ ವಸ್ತು ಪ್ರದರ್ಶನದಲ್ಲಿ ವಿವಿಧ ಇಲಾಖೆಗಳಿಂದ ಆಯೋಜಿಸಲಾಗಿದ್ದ ಕಲಾಕೃತಿಯನ್ನು ಉದ್ಘಾಟಿಸಿ ವಿಕ್ಷಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ವಿ ಜೆ, ಮೂಡಾ ಅಧ್ಯಕ್ಷ ಬಿ ಪಿ ಪ್ರಕಾಶ್, ಸಣ್ಣ ಕೈಗಾರಿಕೆಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿರಘುನಂದನ್, ಮೈಶುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ಕೈಮಗ್ಗ ಜವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ನಾಗೇಂದ್ರ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಶ್ರೀ, ಕೃಷಿ ಇಲಾಖೆಯ ಜೆಡಿ ಆಶೋಕ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

3 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

3 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

4 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

4 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

4 hours ago