ಮಂಡ್ಯ

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ ಹಾಗೂ ಎಲ್ಲಾ ಇಲಾಖೆಗಳಿಂದ ವಿಭಿನ್ನ ರೀತಿಯಲ್ಲಿ ಇಲಾಖೆಯ ಸೌಲಭ್ಯಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ ಮಾಡಲಾಗಿದ್ದು, ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಹೇಳಿದರು.

ಇಂದು ಮಂಡ್ಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಇವರ ಸಂಯುಕ್ತ ಸಂಯುಕ್ತ ಆಶ್ರಯದಲ್ಲಿ ತೋಟಗಾರಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನ 2026 ರ ಕಾರ್ಯಕ್ರಮವನ್ನು ತೋಟಗಾರಿಕೆಯ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕೃಷಿ ಇಲಾಖೆ ವತಿಯಿಂದ ರೈತ ಮಹಿಳೆಯರು ಉದ್ಯಮಿಯಾಗಿ ಪರಿವರ್ತನೆಯಾಗಲು ಹಾಗೂ ಕೃಷಿ ಇಲಾಖೆಯ ವತಿಯಿಂದ ನೀಡಲಾಗುವ ವಿವಿಧ ಅವಕಾಶಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಕೃಷಿ ಇಲಾಖೆಯಿಂದ ರೈತ ಮಹಿಳೆಯರಿಗೆ ಉತ್ತೇಜನ ನೀಡಲು ಯಾಂತ್ರೀಕೃತ ಭತ್ತ ನಾಟಿ ಮಾಡುವ ಯಂತ್ರ ಮತ್ತು ರೈತ ಮಹಿಳೆಯನ್ನು ಹೂವಿನ ಕಲಾಕೃತಿಯಲ್ಲಿ ಪ್ರದರ್ಶಿಸಲಾಗಿದೆ ಎಂದು ಹೇಳಿದರು.

ತಾಯಿಯ ಎದೆ ಹಾಲಿನ ಮಹತ್ವ ಕುರಿತು ಸಂದೇಶ ಸಾರಲು ವಿಶೇಷವಾಗಿ ತಾಯಿ ಮಗುವಿಗೆ ಎದೆಹಾಲು ಉಣಿಸುತ್ತಿರುವ ಕಲಾಕೃತಿಯನ್ನು ಪುಷ್ಪ ಪ್ರದರ್ಶನ ಮಾಡಲಾಗಿದೆ. ಫಲಪುಷ್ಪ ಪ್ರದರ್ಶನದ ಟಿಕೆಟ್ ದರವನ್ನು ವಯಸ್ಕರಿಗೆ ರೂ 30, ಮಕ್ಕಳಿಗೆ ರೂ 20 ಮತ್ತು ಶಾಲಾ ವಿದ್ಯಾರ್ಥಿಗಳಿಗೆ (ಯೂನಿಫಾರ್ಮ್ ನಲ್ಲಿ ಬರುವ ಮಕ್ಕಳಿಗೆ) ಉಚಿತ ಎಂದು ತಿಳಿಸಿದರು.

ರೇಷ್ಮೆ ಇಲಾಖೆಯಿಂದ ರೇಷ್ಮೆ ಹುಳುವಿನ ಕಲಾಕೃತಿ ಪ್ರದರ್ಶನ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ವತಿಯಿಂದ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳ ಪ್ರವಾಸ ತಾಣಗಳ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಜಿಲ್ಲಾ ಎಲ್ಲಾ ಯುವಜನತೆ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡು ಅದರ ಉಪಯೋಗ ಮತ್ತು ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದರು.

ನಂತರ ಎನ್ ಚಲುವರಾಯಸ್ವಾಮಿ ಅವರು ಫಲಪುಷ್ಪ ವಸ್ತು ಪ್ರದರ್ಶನದಲ್ಲಿ ವಿವಿಧ ಇಲಾಖೆಗಳಿಂದ ಆಯೋಜಿಸಲಾಗಿದ್ದ ಕಲಾಕೃತಿಯನ್ನು ಉದ್ಘಾಟಿಸಿ ವಿಕ್ಷಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ವಿ ಜೆ, ಮೂಡಾ ಅಧ್ಯಕ್ಷ ಬಿ ಪಿ ಪ್ರಕಾಶ್, ಸಣ್ಣ ಕೈಗಾರಿಕೆಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿರಘುನಂದನ್, ಮೈಶುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ಕೈಮಗ್ಗ ಜವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ನಾಗೇಂದ್ರ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಶ್ರೀ, ಕೃಷಿ ಇಲಾಖೆಯ ಜೆಡಿ ಆಶೋಕ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago